ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

129 ಮತ ಪಡೆದು ವಿಶ್ವಾಸ ಮತ ಗೆದ್ದ ನಿತೀಶ್ ಕುಮಾರ್, ವಿಪಕ್ಷದ ನಾಲ್ವರಿಂದ ಸಿಎಂ ಪರ ಮತ!

ಪಾಟ್ನಾ: ಬಿಹಾರ ವಿಧಾನಸಭೆಯಲ್ಲಿ ಸಿಎಂ ನಿತೀಶ್ ಕುಮಾರ್ ವಿಶ್ವಾಸ ಮತ ಸಾಬೀತುಪಡಿಸಿದ್ದಾರೆ. 243 ವಿಧಾನಸಭೆ ಕ್ಷೇತ್ರಗಳ ಪೈಕಿ ವಿಶ್ವಾಸ ಮತ ಸಾಬೀತು ಪಡಿಸಲು 122 ಮತಗಳ ಅವಶ್ಯಕತೆ ಇತ್ತು. ನಿತೀಶ್ ಸರ್ಕಾರದ ಪರವಾಗಿ 129 ಮತಗಳು ಚಲಾವಣೆಯಾಗಿವೆ.

ಬಿಹಾರ ವಿಧಾನಸಭೆಯಲ್ಲಿ ನಿತೀಶ್ ಕುಮಾರ್ ಸರ್ಕಾರದ ವಿಶ್ವಾಸಮತ ಪರೀಕ್ಷೆಗೂ ಮುನ್ನವೇ ಎನ್‌ಡಿಎ ಸಮ್ಮಿಶ್ರ ಸರ್ಕಾರದ ಬಹುಮತ ಸಾಬೀತಾಗಿತ್ತು. ಆರ್‌ಜೆಡಿ ಕೋಟಾದಿಂದ ಸ್ಪೀಕರ್ ಆದ ಅವಧ್ ಬಿಹಾರಿ ಚೌಧರಿ ಅವರನ್ನು ಪದಚ್ಯುತಗೊಳಿಸುವ ಪ್ರಸ್ತಾಪದ ಮೇಲಿನ ಮತದಾನದಲ್ಲಿ 125 ಶಾಸಕರು ಸರ್ಕಾರವನ್ನು ಬೆಂಬಲಿಸಿ ಮತ ಚಲಾಯಿಸಿದರೆ 112 ಶಾಸಕರು ಮಾತ್ರ ವಿರೋಧ ಪಕ್ಷದಲ್ಲಿ ಉಳಿದಿದ್ದಾರೆ.

ಸದನದಲ್ಲಿ ಆರ್‌ಜೆಡಿಗೆ ಭಾರಿ ಹಿನ್ನಡೆಯಾಗಿದ್ದು, ಅದರ ಮೂವರು ಶಾಸಕರು ನಿತೀಶ್‌ ಪಕ್ಷಕ್ಕೆ ಪಕ್ಷಾಂತರ ಮಾಡಿದ್ದಾರೆ. ಆರ್‌ಜೆಡಿ ಶಾಸಕರಾದ ಚೇತನ್ ಆನಂದ್, ಪ್ರಹ್ಲಾದ್ ಯಾದವ್ ಮತ್ತು ನೀಲಂ ದೇವಿ ಅವರು ಆಡಳಿತ ಪಕ್ಷದ ಶಾಸಕರೊಂದಿಗೆ ಸದನದಲ್ಲಿ ಕುಳಿತಿದ್ದರು.

No Comments

Leave A Comment