ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ವಿಧಾನಪರಿಷತ್ ಸದಸ್ಯರೊಂದಿಗೆ ಸಿಎಂ ಸಿದ್ದರಾಮಯ್ಯ ಫೋಟೋ ಶೂಟ್! ಬಿ.ಕೆ. ಹರಿಪ್ರಸಾದ್ ಗೈರು

ಬೆಂಗಳೂರು: ವಿಧಾನಪರಿಷತ್ ಸದಸ್ಯರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಫೋಟೋ ಶೂಟ್ ಮಾಡಿಸಿದ್ದಾರೆ. ವಿಧಾನಸೌಧದ ಮುಂಭಾಗ ನಡೆದ ಈ ಫೋಟೋ ಶೂಟ್ ನಲ್ಲಿ ಪಕ್ಷ ಬೇಧ ಮರೆತು ಎಲ್ಲಾ ಪಕ್ಷಗಳ ಸದಸ್ಯರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ.

ಸಚಿವರಾದ ಮಧು ಬಂಗಾರಪ್ಪ, ಬೋಸರಾಜು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ಅವರೊಂದಿಗೆ ಬಹುತೇಕ ಎಲ್ಲಾ ಮೇಲ್ಮನೆ ಸದಸ್ಯರು ಹಾಗೂ ಅಧಿಕಾರಿಗಳು ಇದ್ದಾರೆ. ಆದರೆ, ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಇಲ್ಲಿಯೂ ಗೈರಾಗುವ ಮೂಲಕ ಮತ್ತೆ ಅಸಮಾಧಾನ ಹೊರಹಾಕಿದ್ದಾರೆ.

No Comments

Leave A Comment