ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಚಿನ್ನ, ಬೆಳ್ಳಿ, ಕಂಚು ಪದಕ ಮುಡಿಗೇರಿಸಿಕೊಂಡ ಕೋಟ ದಿನೇಶ್ ಗಾಣಿಗ
ಕೋಟ: ಕೋಟದ ದಿನೇಶ್ ಗಾಣಿಗ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಮೂರು ಪದಕವನ್ನು ಮುಡಿಗೇರಿಸಿಕೊಂಡಿದ್ದಾರೆ.
ಫೆ. 22 ರಿಂದ 25 ರ ತನಕ ಥೈಲ್ಯಾಂಡ್ನ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನ, ಹಡಲ್ಸ್ ನಲ್ಲಿ ದ್ವೀತಿಯ, ಒಂದು ಬೆಳ್ಳಿ ಮತ್ತು ವೇಗ ನಡಿಗೆಯಲ್ಲಿ ತೃತೀಯ, ಒಂದು ಕಂಚು ಪಡೆದುಕೊಂಡಿದ್ದಾರೆ. ಈ ಹಿಂದೆ ಕೂಡ ಸಿಂಗಾಪುರ್, ಮಲೇಷಿಯಾ ಹಾಗೂ ಶ್ರೀಲಂಕಾ ರಾಷ್ರ್ಟ್ರದ ಮಾಸ್ಟರ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿ ಚಿನ್ನ ಬೆಳ್ಳಿ ಕಂಚು ಪದಕ ವಿಜೇತರಾಗಿರುತ್ತಾರೆ.