Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ: ಹಲವರಿಗೆ ಗಂಭೀರ ಗಾಯ!

ಬೆಂಗಳೂರು, (ಮಾರ್ಚ್​ 01):  ನಗರದ ಇಂದಿರಾನಗರದ ಪ್ರಸಿದ್ಧ ಹೊಟೆಲ್‌ ರಾಮೇಶ್ವರಂ ಕೆಫೆಯಲ್ಲಿ(rameshwaram cafe)  ನಿಗೂಢ ವಸ್ತು ಸ್ಫೋಟವಾಗಿದೆ(mysterious explosion). ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ ಓಡಿಡಾಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದೆ.

ನಿಗೂಢ ಸ್ಫೋಟದ ವೇಳೆ ಭಾರಿ ಪ್ರಮಾಣದ ಶಬ್ಧವಾಗಿದೆ. ಇದರಿಂದ ಜನರು ಒಂದು ಕ್ಷಣ ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಆದ್ರೆ,  ಸ್ಫೋಟಕ್ಕೆ ಕಾರಣ ಏನು ಎನ್ನುವುದು ಮಾತ್ರ ಇನ್ನೂ ತಿಳಿದುಬಂದಿದಲ್ಲ. ಸ್ಥಳಕ್ಕೆ ಎಚ್​ಎಎಲ್​ ಪೊಲೀಸ್ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

No Comments

Leave A Comment