Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕಲ್ಕತ್ತಾ ಹೈಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಅಭಿಜಿತ್ ಗಂಗೋಪಾಧ್ಯಾಯ ರಾಜೀನಾಮೆ, ಮಾ. 7ರಂದು ಬಿಜೆಪಿ ಸೇರ್ಪಡೆ

ಕೋಲ್ಕತಾ: ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಕಲ್ಕತ್ತಾ ಹೈಕೋರ್ಟ್‌ ನ್ಯಾಯಮೂರ್ತಿ ಹುದ್ದೆಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ತಾವು ಬಿಜೆಪಿ ಸೇರುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಭಿಜಿತ್ ಗಂಗೋಪಾಧ್ಯಾಯ ಅವರು, ಮಾರ್ಚ್ 7ರಂದು ಬಿಜೆಪಿ ಸೇರುವುದಾಗಿ ತಿಳಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿರುವ ರಾಷ್ಟ್ರೀಯ ಪಕ್ಷ ಬಿಜೆಪಿಗೆ ನಾನು ಸೇರುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.
ಅಭಿಜಿತ್ ಗಂಗೋಪಾಧ್ಯಾಯ ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು, ಸಿಜೆಐ ಡಿವೈ ಚಂದ್ರಚೂಡ್ ಮತ್ತು ಕಲ್ಕತ್ತಾ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ಅವರಿಗೆ ಕಳುಹಿಸಿದ್ದಾರೆ

No Comments

Leave A Comment