ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಮಲ್ಪೆ: ಅಕ್ರಮ ಮರಳು ಸಾಗಾಟ : ಟಿಪ್ಪರ್ ಸಹಿತ ಓರ್ವ ವಶಕ್ಕೆ.
ಮಲ್ಪೆ: ಉಡುಪಿ ನಗರದ ಮಲ್ಪೆ ಸಮೀಪ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದರೆನ್ನಲಾದ ಖಚಿತ ಮಾಹಿತಿಯ ಮೇರೆಗೆ ವಾಹನ ತಪಾಸಣೆ ಮಾಡುತ್ತಿರುವ ವೇಳೆ ದಾಳಿ ನಡೆಸಿದ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ಟಿಪ್ಪರ್ ಸಹಿತ ಮರಳನ್ನು ಸ್ವಾಧೀನ ಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ
ಪೊಲೀಸರು ವಾಹನವನ್ನು ತಡೆದು ನಿಲ್ಲಿಸಿ ಚಾಲಕನನ್ನು ವಿಚಾರಿಸುತ್ತಿರುವಾಗ ದಿನೇಶ್ ಎಂಬ ವ್ಯಕ್ತಿ ಬಂದು ಈ ಮರಳನ್ನು ನಾನೇ ಸಾಗಾಟ ಮಾಡುತ್ತಿರುವುದು, ಸಾಗಾಟಕ್ಕೆ ಯಾವುದೆ ಅನುಮತಿ ಇಲ್ಲದಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸಿದ್ದಾರೆ.