ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಧರ್ಮಸ್ಥಳ : ಮಹಾಶಿವರಾತ್ರಿ ದಿನವೇ ಶ್ರೀಕ್ಷೇತ್ರ ಧರ್ಮಸ್ಥಳದ ಆನೆ ಲತಾ ಶಿವೈಕ್ಯ

ಧರ್ಮಸ್ಥಳ : ಶ್ರೀಕ್ಷೇತ್ರ ಧರ್ಮಸ್ಥಳದ 60ವರ್ಷ ಪ್ರಾಯದ ಲತಾ ಕಳೆದ 50ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಇಂದು ಶಿವರಾತ್ರಿಯಂದು ಧರ್ಮಸ್ಥಳದ ಆನೆ ಶಿವೈಕ್ಯವಾಗಿದೆ. ಲತಾ ಹೆಸರಿನ ಆನೆ ಇಂದು ಮೃತಪಟ್ಟಿದೆ.

ಧರ್ಮಸ್ಥಳ ಧರ್ಮಾಧಿಕಾರಿಗಳ ಅಚ್ಚುಮೆಚ್ಚಿನ ಆನೆ ಭಕ್ತಾದಿಗಳಿಗೂ ಯಾವುದೇ ತೊಂದರೆ ನೀಡದೆ ಏನನ್ನೂ ಅಪೇಕ್ಷಿಸದೇ ಇದ್ದ ಲತಾ ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ.

ಕಳೆದ 50 ವರ್ಷಗಳಿಂದ ಧರ್ಮಸ್ಥಳದ ಜಾತ್ರಾ ಮಹೋತ್ಸವದಲ್ಲಿ ಗಾಂಭೀರ್ಯದ ಹೆಜ್ಜೆ ಹಾಕಿ ಎಲ್ಲರ ಚಿತ್ತ ಸೆಳೆಯುತ್ತಿದ್ದ,ಉತ್ಸವಗಳು ನಡೆಯುವಾಗ ಸೊಂಡಿಲು ಎತ್ತಿ ನಮಸ್ಕರಿಸುತ್ತಾ ಸಾಗುವುದನ್ನು ನೋಡುವುದೇ ಒಂದು ಖುಷಿಯಾಗಿತ್ತು. ವಯಸ್ಸಾಗಿರೋ ಲತಾ ಶಿವರಾತ್ರಿಯಂದೇ ಶಿವನ ಪಾದ ಸೇರಿದ್ದು, ಧರ್ಮಸ್ಥಳ ಕ್ಷೇತ್ರದ ಜನರು ಕಂಬನಿ ಮಿಡಿದಿದ್ದಾರೆ.ಲತಾ ಆನೆಯ ಅಂತ್ಯ ಸಂಸ್ಕಾರ ಇಂದು ಸಂಜೆ ವೇಳೆಗೆ ನಡೆಯುವ ಸಾಧ್ಯತೆ ಇದೆ. ಆನೆ ಸಾವಿನ ಸುದ್ದಿ ತಿಳಿದು ಸುತ್ತಮುತ್ತಲ ಭಕ್ತರು ದೇವಸ್ಥಾನದ ಬಳಿ ಆಗಮಿಸುತ್ತಿದ್ದಾರೆ.

No Comments

Leave A Comment