ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬಿಎಸ್​ವೈ ವಿರುದ್ಧ ಪೋಕ್ಸೋ ಪ್ರಕರಣ: ಇದು ಅತ್ಯಂತ ಸೂಕ್ಷ್ಮ ವಿಷಯವೆಂದ ಪರಮೇಶ್ವರ್

ಬೆಂಗಳೂರು:ಮಾ 15: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇದೊಂದು ಸೂಕ್ಷ್ಮ ವಿಷಯವಾಗಿರುವುದರಿಂದ ಗೃಹ ಸಚಿವರೇ ಮಾತಾಡುತ್ತಾರೆ ಎಂದಿದ್ದಾರೆ.

ನಂತರ ಮಾತನಾಡಿದ ಪರಮೇಶ್ವರ್, ” ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಮಹಿಳೆಯೊಬ್ಬರು ತಮ್ಮ ಮಗಳಿಗೆ ಕಿರುಕುಳ ನೀಡಿದ್ದಾರೆ ಎಂದು ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಹೀಗಾಗಿ ಪೊಲೀಸರು ಪ್ರಕರಣ ದಾಖಲಿಸಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ. ಇದು ಮಾಜಿ ಮುಖ್ಯಮಂತ್ರಿ ಅವರ ವಿಚಾರವಾಗಿರುವುದರಿಂದ ಇದು ಅತ್ಯಂತ ಸೂಕ್ಷ್ಮ ವಿಷಯವಾಗಿದೆ. ವರದಿ ಏನು ಹೇಳುತ್ತದೆ ಎಂದು ನೋಡೋಣ” ಎಂದು ಹೇಳಿದ್ದಾರೆ.

ಇದೇ ವೇಳೆ ಪ್ರಕರಣದಲ್ಲಿ ಯಾವುದೇ ರಾಜಕೀಯ ಕೋನವನ್ನು ತಳ್ಳಿಹಾಕಿದ ಸಚಿವರು, “ಇದರಲ್ಲಿ ರಾಜಕೀಯ ಕೋನವಿದೆ ಎಂದು ನಾನು ಭಾವಿಸುವುದಿಲ್ಲ, ಮಹಿಳೆ ಯಾರೆಂದು ತಿಳಿದಿಲ್ಲ, ಅವರೇ ನೇರವಾಗಿ ಪೊಲೀಸರಿಗೆ ಹೋಗಿ ದೂರು ನೀಡಿದ್ದಾರೆ, ಪೊಲೀಸರು ನಿರಾಕರಿಸದೇ ಪ್ರಕರಣ ದಾಖಲಿಸಿದ್ದಾರೆ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರ ಕಚೇರಿಯು ಈ ಆರೋಪಗಳನ್ನು ನಿರಾಧಾರ ಎಂದು ತಳ್ಳಿಹಾಕಿದ್ದು, ತಾಯಿ ಮತ್ತು ಮಗಳು ಈ ಹಿಂದೆ 50 ಕ್ಕೂ ಹೆಚ್ಚು ದೂರುಗಳನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಯಡಿಯೂರಪ್ಪ ಅವರ ಕಚೇರಿಯೂ ಈ ಹಿಂದೆ ಸಲ್ಲಿಸಲಾದ 53 ವಿವಿಧ ದೂರುಗಳನ್ನು ಬಿಡುಗಡೆ ಮಾಡಿದೆ.

kiniudupi@rediffmail.com

No Comments

Leave A Comment