Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಡುಪಿ: ಪರ್ಕಳದ ಕೆರೆ ಅಭಿವೃದ್ಧಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆ

ಉಡುಪಿ, ಮಾರ್ಚ್ 20: ಜಿಲ್ಲೆಯ (Udupi) ಪರ್ಕಳದ ದುರ್ಗಾ ನಗರದಲ್ಲಿ ಉಷಾ ನಾಯಕ್ ಎಂಬುವವರ ಮನೆಯ ಬಳಿ ಇರುವ ಕೆರೆ ಅಭಿವೃದ್ಧಿ ಕಾಮಗಾರಿ ವೇಳೆ ಪುರಾತನ ದೇವಾಲಯದ ಅವಶೇಷಗಳು ಪತ್ತೆಯಾಗಿವೆ. ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.

ಕಳೆದ ಐದು ದಿನಗಳಿಂದ ಪರ್ಕಳ ಕೆರೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ಮಣ್ಣು ಅಗೆಯುವ ಯಂತ್ರ ಬಳಸಿ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ. ಈ ವೇಳೆ, ಕಾಮಗಾರಿ ನಡೆಯುತ್ತಿರುವಾಗ ಪ್ರಾಣಪೀಠದಲ್ಲಿ ತೀರ್ಥ ಹರಿಯುವ ಕಲ್ಲಿನ ಕುಂಡ ಹಾಗೂ ಎಲ್ ಆಕಾರದ ವಿಗ್ರಹ ಪತ್ತೆಯಾಗಿವೆ.

ಈ ಹಿಂದೆ ಪರ್ಕಳ ಕೆಳಗಿನ ಪರ್ಕಳದ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರದ ವೇಳೆ ಪರ್ಕಳ ನಗರ ಸಭಾ ಸದಸ್ಯ ರಾಮದಾಸ್ ನಾಯ್ಕ್ ಅವರು ಪ್ರಶ್ನೆ ಎತ್ತಿದಾಗ ಐಕೆರೆಯಲ್ಲಿ ಜೆಸಿಬಿ ಮೂಲಕ ಸುಮಾರು 15 ದಿನಗಳ ಕಾಲ ಮಣ್ಣು ತೆರವು ಮಾಡಿದರೂ ಯಾವುದೇ ಕುರುಹು ಪತ್ತೆಯಾಗಿಲ್ಲ.

ಐಕೆರೆಯಲ್ಲಿ ಕೆರೆಯ ಅಭಿವೃದ್ಧಿಯನ್ನು ದೊಡ್ಡ ಮಟ್ಟದಲ್ಲಿ ಕೈಗೆತ್ತಿಕೊಂಡ ನಂತರ ದೇವಾಲಯದ ಅವಶೇಷಗಳು ಪತ್ತೆಯಾಗಿರುವುದು ವಿಶೇಷ. ಸ್ಥಳೀಯ ನಿವಾಸಿ ಉಷಾ ನಾಯಕ್ ಅವರ ಮಾಹಿತಿ ಮೇರೆಗೆ ಸಮಾಜ ಸೇವಕ ಗಣೇಶ್ ರಾಜ್ ಸರಳಬೆಟ್ಟು ಅವರು ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮೋಹನ್ ದಾಸ್ ನಾಯಕ್ ಪರ್ಕಳ, ಗಣೇಶ್ ಸಣ್ಣಕ್ಕಿ ಬೆಟ್ಟು ಮತ್ತಿತರರು ಇದ್ದರು.

No Comments

Leave A Comment