ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಸರಕು ಹಡಗು ಡಿಕ್ಕಿ ಹೊಡೆದು ಕುಸಿದು ಬಿದ್ದ ಸೇತುವೆ- ವಾಹನಗಳು ನೀರಿಗೆ ಬಿದ್ದಿರುವ ಸಾಧ್ಯತೆ

ವಾಷಿಂಗ್ಟನ್:ಮಾ, 26. ಸರಕು ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕದ ಬಾಲ್ಟಿಮೋರ್ನಲ್ಲಿರುವ ಫ್ರಾನ್ಸಿಸ್ ಸ್ಕಾಟ್ ಕೀ ಸೇತುವೆ ಕುಸಿದು ಬಿದ್ದಿದೆ ಎಂದು ಮೇರಿಲ್ಯಾಂಡ್ ಸಾರಿಗೆ ಪ್ರಾಧಿಕಾರ ಮಂಗಳವಾರ ತಿಳಿಸಿದೆ.

ಘಟನೆಯಿಂದ ಸೇತುವೆ ಮೇಲೆ ಸಂಚರಿಸುತ್ತಿದ್ದ ಹಲವು ವಾಹನಗಳು ನೀರಿಗೆ ಬಿದ್ದಿರುವುದಾಗಿ ವರದಿ ತಿಳಿಸಿದ್ದು, ರಕ್ಷಣಾ ತಂಡದಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸೇತುವೆ ಕುಸಿದು ಬೀಳುವ ದೃಶ್ಯ ವೈರಲ್ ಆಗಿದೆ. ಸರಕು ತುಂಬಿದ ಹಡಗು ಸಾಗುತ್ತಿದ್ದ ವೇಳೆ ಸೇತುವೆಯ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕುಸಿದು ಬಿದ್ದಿದೆ ಈ ವೇಳೆ ಸೇತುವೆ ಮೇಲೆ ಹಲವು ವಾಹನಗಳು ಇದ್ದವು ಎಂದು ಹೇಳಲಾಗಿದ್ದು ಅವೆಲ್ಲವೂ ನದಿಗೆ ಬಿದ್ದಿರುವುದಾಗಿ ಹೇಳಲಾಗಿದೆ.

ಮೇರಿಲ್ಯಾಂ ಡ್ ಸಾರಿಗೆ ಪ್ರಾಧಿಕಾರವು ಎಕ್ಸ್ನಲ್ಲಿ ಪೋಸ್ಟ್ ಮಾಡಿ, ತಕ್ಷಣ ರಕ್ಷಣಾ ತಂಡ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದೆ. ಇತ್ತ ಸೇತುವೆ ಕುಸಿತದಿಂದ ವಾಹನ ಸಂಚಾರ ಕೂಡ ಸ್ಥಗಿತಗೊಂಡಿದೆ ಎಂದು ತಿಳಿಸಿದೆ.

kiniudupi@rediffmail.com

No Comments

Leave A Comment