ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಬ್ರಹ್ಮಾವರ: ರಿಕ್ಷಾ ಚಾಲಕನ ಸಾವಿನ ಸುತ್ತ ಅನುಮಾನದ ಹುತ್ತ.
ಉಡುಪಿ: ಬಾಡಿಗೆಗೆ ಹೋದ ಆಟೋ ಚಾಲಕನೋರ್ವ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ನಡೆದಿದೆ.
ಮೂಡುತೋನ್ಸೆ ಗ್ರಾಮದ ಮಹಮ್ಮದ್ ಫೈಜಲ್ (36) ಮೃತಪಟ್ಟ ಆಟೋ ಚಾಲಕ. ಇವರು ಮಾ. 27ರಂದು ರಾತ್ರಿ ಬಾಡಿಗೆಗೆ ಹೋಗಲಿಕ್ಕೆ ಇದೆಯೆಂದು ಮನೆಯಿಂದ ತೆರಳಿದ್ದರು. ಬಳಿಕ ಮನೆಗೆ ಬಾರದೆ, ಸಂಪರ್ಕಕ್ಕೂ ಸಿಗದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಇದೀಗ ಅವರ ಶವ ಉಪ್ಪೂರು ಗ್ರಾಮದ ಮಾಯಾಡಿ ಎಂಬಲ್ಲಿ ಸುವರ್ಣ ನದಿಯಲ್ಲಿ ಪತ್ತೆಯಾಗಿದೆ. ಫೈಜಲ್ ಅವರು ಸುವರ್ಣ ನದಿಯ ನೀರಿನಲ್ಲಿ ಬಿದ್ದು ಮೃತಪಟ್ಟಿದ್ದು, ಅವರ ಸಾವಿನಲ್ಲಿ ಸಂಶಯವಿದೆ ಎಂದು ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ ಪೊಲೀಸರು ಈ ಪ್ರಕರಣವನ್ನು ವಿಚಾರಣೆ ನಡೆಸುತ್ತಿದ್ದಾರೆ.