ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

“ಕಿರಾತಕ” ಖ್ಯಾತಿಯ ಬಹುಭಾಷಾ ನಟ ಡೇನಿಯಲ್ ಬಾಲಾಜಿ ಹೃದಯಾಘಾತದಿಂದ ನಿಧನ

ಚೆನ್ನೈ: ಮಾರ್ಚ್ : 30: ಪ್ರೈಮ್ ಟಿವಿ ನ್ಯೂಸ್ : ಬಹುಭಾಷಾ ನಟ ಡೇನಿಯಲ್ ಬಾಲಾಜಿ (48) ಅವರು ಇಂದು  ಹೃದಯಾಘಾತದಿಂದ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಈಚೆಗೆ ಡೇನಿಯಲ್ ಬಾಲಾಜಿ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಡೇನಿಯಲ್ ಬಾಲಾಜಿ ಅವರು ತಮಿಳು ಕಿರುತೆರೆ ಮೂಲಕ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ‘ಚಿತ್ತಿ’ ಧಾರಾವಾಹಿಯಲ್ಲಿನ ಪಾತ್ರಕ್ಕಾಗಿ ಹೆಚ್ಚು ಖ್ಯಾತಿ ಪಡೆದಿದ್ದರು. ಬಳಿಕ ‘ಕಾಖಾ ಕಾಖಾ’, ‘ಪೊಲ್ಲಾಧವನ್’, ‘ವೆಟ್ಟೈಯಾಡು‌ ವಿಲಾಯಾಡು’, ‘ವಡಾ ಚೆನ್ನೈ’ ‘ಬಿಗಿಲ್‌’ ಸೇರಿದಂತೆ 40ಕ್ಕೂ ಹೆಚ್ಚು ತಮಿಳು ಚಿತ್ರಗಳಲ್ಲಿ ನಟಿಸಿದ್ದಾರೆ. ಯಶ್‌ ಅಭಿನಯದ ‘ಕಿರಾತಕ’ ಚಿತ್ರದಲ್ಲೂ ಡೇನಿಯಲ್ ಕಾಣಿಸಿಕೊಂಡಿದ್ದರು. ಜತೆಗೆ, ತೆಲುಗು, ಮಲಯಾಳಂ ಚಿತ್ರಗಳಲ್ಲಿಯೂ ಅಭಿನಯಿಸಿದ್ದರು.

ಡೇನಿಯಲ್ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. ಡೇನಿಯಲ್ ಅವರ ಅಂತ್ಯಕ್ರಿಯೆ ಪುರಸೈವಾಲ್ಕಂನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

kiniudupi@rediffmail.com

No Comments

Leave A Comment