ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕ್ರಷರ್ ಮಾಲೀಕನ ಮನೆ ಮೇಲೆ ಐಟಿ ದಾಳಿ: 1 ಕೋಟಿ ರೂ. ನಗದು, 800 ಗ್ರಾಂ ಚಿನ್ನಾಭರಣ ವಶಕ್ಕೆ
ಬೆಂಗಳೂರು ಗ್ರಾಮಾಂತರ, ಮಾ.31: ಕ್ರಷರ್ ಮಾಲೀಕನ ಮನೆ ಮೇಲೆ ಐಟಿ(IT) ಇಲಾಖೆ ಅಧಿಕಾರಿಗಳು ಇಂದು(ಮಾ.31) ದಾಳಿ ನಡೆಸಿದ್ದು, 1.20 ಕೋಟಿ ನಗದು ಹಾಗೂ 800 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಆಪ್ತ ಸಹಾಯಕ ಮಂಜುನಾಥ್ ಎಂಬುವವರ ಅಳಿಯ ಆಗಿರುವ ಲೋಕೇಶ್, ಕೆಲದಿನಗಳ ಹಿಂದೆ ಗಡಿಭಾಗದ ಚೆಕ್ಪೋಸ್ಟ್ನಲ್ಲಿ 10 ಲಕ್ಷ ಹಣದ ಜೊತೆ ಸಿಕ್ಕಿಬಿದ್ದಿದ್ದರು. ಈ ಹಿನ್ನಲೆ ಅನುಮಾನದಿಂದ ಐಟಿ ಇಲಾಖೆ ಡಿಡಿ ವಿಷ್ಣುಪ್ರಸಾದ್ ನೇತೃತ್ವದಲ್ಲಿ 6 ಅಧಿಕಾರಿಗಳು ತಮಿಳುನಾಡಿನ ಹೊಸೂರಿನಲ್ಲಿರುವ ಲೋಕೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ ದಾಖಲೆ ಇಲ್ಲದೆ ಸಂಗ್ರಹಿಸಿದ್ದ ಚಿನ್ನಾಭರಣ, ನಗದು ಪತ್ತೆಯಾಗಿದೆ.