ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ರಾಜ್ಯದಲ್ಲಿ ವಿದ್ಯುತ್​ ದರ ಇಳಿಕೆ: ಪ್ರತಿ ಯುನಿಟ್​ಗೆ 1.10 ರೂ. ಕಡಿತ, ಇಂದಿನಿಂದಲೇ ಜಾರಿ

ಬೆಂಗಳೂರು: ಲೋಕಸಭೆ ಚುನಾವಣೆ ಸಮಯದಲ್ಲಿ ಕರ್ನಾಟಕ ರಾಜ್ಯ ವಿದ್ಯುತ್​ಚ್ಛಕ್ತಿ ನಿಯಂತ್ರಣ ಆಯೋಗ(KERC)ಎಲ್ಲ ವರ್ಗದ ವಿದ್ಯುತ್​ ಬಳಕೆದಾರರಿಗೆ ಗುಡ್​ ನ್ಯೂಸ್​ ನೀಡಿದೆ.

ಕೆಇಆರ್ ಸಿ ವಿದ್ಯುತ್​ ದರ ಇಳಿಕೆ ಮಾಡಿ ಸೋಮವಾರ ಆದೇಶ ಹೊರಡಿಸಿದ್ದು, 100 ಯುನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ.

ಗೃಹ ಬಳಕೆಯಲ್ಲಿ 100 ಯುನಿಟ್​​ಗಿಂತ ಹೆಚ್ಚು ವಿದ್ಯುತ್​​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​ಗೆ 1.10 ರೂ. ಕಡಿಮೆ ಮಾಡಲಾಗಿದೆ. ಈ ಮೂಲಕ 15 ವರ್ಷಗಳ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಇಳಿಕೆಯಾಗಿದೆ.

2024-25ನೇ ಸಾಲಿಗೆ ಅನ್ವಯವಾಗುವಂತೆ ಈ ಪರಿಷ್ಕೃತ ದರ ಇಂದಿನಿಂದಲೇ(ಏಪ್ರಿಲ್​ 01) ಜಾರಿಗೆ ಬರಲಿದೆ. ಎಲ್ಲಾ ಎಸ್ಕಾಂಗಳಿಗೂ ಏಕರೂಪದ ಗೃಹಬಳಕೆ ವಿದ್ಯುತ್​ ದರ ನಿಗದಿ ಮಾಡಿದೆ.

ಮೊದಲು 100ಕ್ಕಿಂತ ಹೆಚ್ಚು ಯುನಿಟ್​ ವಿದ್ಯುತ್​ ಬಳಕೆ ಮಾಡುವವರಿಗೆ ಪ್ರತಿ ಯುನಿಟ್​​ಗೆ 7 ರೂ. ನಿಗದಿ ಮಾಡಲಾಗಿತ್ತು. ಇದೀಗ 7 ರೂ. ಬದಲಿಗೆ ಪ್ರತಿ ಯುನಿಟ್​ಗೆ 5.90 ರೂ. ಮಾತ್ರ ಶುಲ್ಕ ವಿಧಿಸಲಾಗಿದೆ. ಇನ್ನು 100 ಯುನಿಟ್​ಗಿಂತ ಕಡಿಮೆ ವಿದ್ಯುತ್​ ಬಳಕೆ ಮಾಡುವವರು ಈಗಾಗಲೆ ಪ್ರತಿ ಯುನಿಟ್​ಗೆ 4.75 ರೂ. ಪಾವತಿಸುತ್ತಿದ್ದಾರೆ.

ಇನ್ನು ರಾಜ್ಯ ಸರ್ಕಾರ 200 ಯುನಿಟ್​ ಒಳಗೆ ಬಳಸುವವರಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್​ ನೀಡುವುದರಿಂದ ಈ ಸೌಲಭ್ಯಕ್ಕೆ ನೋಂದಾಯಿಸಿಕೊಂಡವರಿಗೆ ದರ ಇಳಿಕೆಯ ಪ್ರಯೋಜನ ಸಿಗುವುದಿಲ್ಲ.

kiniudupi@rediffmail.com

No Comments

Leave A Comment