ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಗೆ 15 ದಿನ ನ್ಯಾಯಾಂಗ ಬಂಧನ

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ದೆಹಲಿ ನ್ಯಾಯಾಲಯ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕೇಜ್ರಿವಾಲ್ ಅವರ ಜಾರಿ ನಿರ್ದೇಶನಾಲಯದ ಕಸ್ಟಡಿ ಅವಧಿ ಇಂದು ಮುಗಿದಿದ್ದು, ಆರೋಪಿಯನ್ನು ರೋಸ್ ಅವೆನ್ಯೂ ಕೋರ್ಟ್ ಗೆ ಹಾಜರುಪಡಿಸಲಾಯಿತು. ಕೇಜ್ರಿವಾಲ್ ಅವರನ್ನು ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ಆರೋಪಿಯನ್ನು ಏಪ್ರಿಲ್ 15 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಎಎಪಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಮತ್ತು ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು ನ್ಯಾಯಾಲಯದಲ್ಲಿ ಹಾಜರಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಮರುದಿನ, ವಿಶೇಷ ನ್ಯಾಯಾಧೀಶೆ ಕಾವೇರಿ ಬವೇಜಾ ಅವರು ಆರೋಪಿ ದೆಹಲಿ ಸಿಎಂ ಅನ್ನು ಮಾರ್ಚ್ 28 ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ಕಸ್ಟಡಿಗೆ ನೀಡಿದ್ದರು. ನಂತರ ಕೇಜ್ರಿವಾಲ್ ಅವರ ಇಡಿ ಕಸ್ಟಡಿ ಅವಧಿಯನ್ನು ಏಪ್ರಿಲ್ 1 ರವರೆಗೆ ನಾಲ್ಕು ದಿನಗಳ ಕಾಲ ವಿಸ್ತರಿಸಿತ್ತು.

ಕಸ್ಟಡಿ ವಿಚಾರಣೆ ಸಮಯದಲ್ಲಿ ಐದು ದಿನಗಳಲ್ಲಿ ಕೇಜ್ರಿವಾಲ್ ಅವರ ಹೇಳಿಕೆಗಳನ್ನು ದಾಖಲಿಸಲಾಗಿದ್ದು, ಅವರು ತಪ್ಪಿಸಿಕೊಳ್ಳುವ ಉತ್ತರ ನೀಡುತ್ತಿದ್ದಾರೆ ಎಂದು ಇಡಿ ಹೊಸ ರಿಮಾಂಡ್ ಅರ್ಜಿಯಲ್ಲಿ ಹೇಳಿತ್ತು. ಕಸ್ಟಡಿ ಅವಧಿಯಲ್ಲಿ ಇತರ ಮೂವರ ಹೇಳಿಕೆಗಳನ್ನು ಸಹ ದಾಖಲಿಸಲಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ತಿಳಿಸಿದೆ.

kiniudupi@rediffmail.com

No Comments

Leave A Comment