ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಕೆ
ಉಡುಪಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ, ಬಿಜೆಪಿ ಅಭ್ಯರ್ಥಿ ಕೋಟಶ್ರೀನಿವಾಸ್ ಪೂಜಾರಿ ಮ೦ಗಳವಾರದ೦ದು ತಮ್ಮ ನಾಮಪತ್ರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.
ವಿನಯಕುಮಾರ್ ಸೊರಕೆ,ಮೋಟಮ್ಮ ಹಾಗೂ ಇತರ ಮುಖ೦ದರು ಹೆಗ್ಡೆಗೆ ಸಾಥ್ ನೀಡಿದರು.ಸಿ.ಟಿ.ರವಿ,ಸುರೇಶ್ ಶೆಟ್ಟಿ ಗುರ್ಮೆ,ಯಶ್ಪಾಲ್ ಸುವರ್ಣ ರವರು ಕೋಟ ಶ್ರೀನಿವಾಸ್ ಪೂಜಾರಿಗೆ ಸಾಥ್ ನೀಡಿದರು.
ಎರಡುಪಕ್ಷದವರು ಕಾರ್ಯಕರ್ತರ ಸಭೆಯನ್ನು ನಡೆಸಿತ್ತು, ಪಕ್ಷದ ಘಟಾನುಘಟಿ ನಾಯಕರು ಈ ಸಭೆಯಲ್ಲಿ ಭಾಗವಹಿಸಿದ್ದರು