ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ವಿಜಯಪುರ: ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್ ರಕ್ಷಣೆ, ಫಲಿಸಿದ ಪ್ರಾರ್ಥನೆ
ವಿಜಯಪುರ, ಏಪ್ರಿಲ್ 4: ವಿಜಯಪುರ (Vijayapura) ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ (Lachyana) ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಮಗು ಸಾತ್ವಿಕ್ನನ್ನು ಕೊನೆಗೂ ರಕ್ಷಣೆ ಮಾಡಲಾಗಿದೆ. ಸತತ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಮಗುವನ್ನು ರಕ್ಷಣೆ ಮಾಡಲಾಗಿದೆ. ಮಗುವಿನ ಪೋಷಕರಾದ ಸತೀಶ್ ಮತ್ತು ಪೂಜಾ ದಂಪತಿ ಹಾಗೂ ಸ್ಥಳೀಯರು ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಸಾತ್ವಿಕ್ನನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ರಕ್ಷಣಾ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿ ಮಗು ಸಾತ್ವಿಕ್ನನ್ನು ರಕ್ಷಿಸಿದ ಸಿಬ್ಬಂದಿಯ ಬಗ್ಗೆ ಇದೀಗ ಎಲ್ಲೆಡೆ ಮೆಚ್ಚುಗೆಯ ಮಹಾಪೂರವೇ ವ್ಯಕ್ತವಾಗುತ್ತಿದೆ. ಸಾತ್ವಿಕ್ನನ್ನು ತಕ್ಷಣವೇ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಎನ್ಡಿಆರ್ಎಫ್ ತಂಡ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಇವರಿಗೆ ಬೆಳಗಾವಿಯಿಂದ ಬಂದಿದ್ದ ಶ್ರೀಶೈಲ್ ಚೌಗಲಾ ನೇತೃತ್ವದ ರಾಜ್ಯ ವಿಪತ್ತು ನಿರ್ವಹಣಾ ತಂಡ (ಎಸ್ಡಿಆರ್ಎಫ್), ಸ್ಥಳೀಯ ಪೊಲೀಸರು, ಅಗ್ನಿ ಶಾಮಕ ದಳ ಸಿಬ್ಬಂದಿ ಸಾಥ್ ನೀಡಿದರು.
ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತ ತಲುಪುತ್ತಿದ್ದಂತೆಯೇ ಆಂಬುಲೆನ್ಸ್ ಸಿದ್ಧವಾಗಿ ಇರಿಸಲಾಗಿತ್ತು. ಮಗುವನ್ನು ಕೊಳವೆ ಬಾವಿಯಿಂದ ಹೊರ ತೆಗೆಯುತ್ತಿದ್ದಂತೆಯೇ ಪ್ರಾಥಮಿಕ ಚಿಕಿತ್ಸೆ ನೀಡಿ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಅಂತಿಮ ಹಂತದ ಕಾರ್ಯಾಚರಣೆ ವೇಳೆ ಮಗು ಅಳುತ್ತಿರುವ ಶಬ್ದ ರಕ್ಷಣಾ ಸಿಬ್ಬಂದಿಗೆ ಕೇಳಿಸುತ್ತಿತ್ತು. ಯಂತ್ರಗಳ ಸದ್ದು ಹೆಚ್ಚಾದಂತೆ ಮಗು ಅಳುತ್ತಿರುವುದೂ ಹೆಚ್ಚಾಗಿತ್ತು ಎಂದು. ಮಗು ಚೀರಾಡುತ್ತಿತ್ತು ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸ್ಥಳಕ್ಕೆ ಬಂದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದರು. ರಕ್ಷಣೆಗೆ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದ್ದರು.
ಲಚ್ಯಾಣ ಗ್ರಾಮದ ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಎಂಬವರು ಮಂಗಳವಾರ ಕೊಳವೆ ಬಾವಿ ಕೊರೆಯಿಸಿದ್ದರು. ಸುಮಾರು 500 ಅಡಿ ಆಳ ಕೊರೆಸಲಾಗಿತ್ತು. ಆದರೆ, ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದರು. ಶಂಕರಪ್ಪ ಮುಜಗೊಂಡ ಮೊಮ್ಮಗ ಸಾತ್ವಿಕ್ ಬುಧವಾರ ಕೊಳವೆ ಬಾವಿಗೆ ಬಿದ್ದಿದ್ದಾನೆ. ಆತ ಸುಮಾರು 15ರಿಂದ 20 ಅಡಿ ಆಳದಲ್ಲಿ ಸಿಲುಕಿದ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಆ್ಯಕ್ಸಿಜನ್ ವ್ಯವಸ್ಥೆ ಮಾಡಲಾಗಿತ್ತು.
ಇಂದಿನ ಪ್ರಕರಣಕ್ಕೂ ಮುಂಚೆ ಇಂತಹ ಎರಡು ಪ್ರಕರಣಗಳು ವಿಜಯಪುರ ಜಿಲ್ಲೆಯಲ್ಲಿ ನಡೆದಿದ್ದವು. 2008 ಮತ್ತು 2014ರಲ್ಲಿಕೊಳವೆ ಬಾವಿ ದುರಂತಗಳು ಸಂಭವಿಸಿದ್ದವು. 2008 ರಲ್ಲಿ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಕಾಂಚನಾ ಉರ್ಪ್ ಏಗವ್ವ ಎನ್ನುವ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಆದ್ರೆ, ಮಗು ಮೃತಪಟ್ಟಿತ್ತು.