Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಚುನಾವಣೆ ಮಧ್ಯ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿಗೆ ಕೋರ್ಟ್ ಸಂಕಷ್ಟ

ಬೆಂಗಳೂರು, (ಏಪ್ರಿಲ್ 05): ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ (code of conduct violation) ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ(Kota Srinivas Poojary )ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಸಮನ್ಸ್ ಜಾರಿ ಮಾಡಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಆರ್.ಮೆಂಡನ್​ ಅವರಿಗೂ ಸಹ ಮೇ 27ರಂದು ಖುದ್ದಾಗಿ ಹಾಜರಾಗುವಂತೆ ಕೋರ್ಟ್ ಸಮನ್ಸ್​ ಜಾರಿ ಮಾಡಿ ಆದೇಶ ಹೊರಡಿಸಿದೆ.

ಮಾರ್ಚ್​ 30ರಂದು ಕಟಪಾಡಿ ಖಾಸಗಿ ಕಾಲೇಜು ಆವರಣದಲ್ಲಿ ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೇ ಪ್ರಚಾರ ಸಭೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ, ಮಾದರಿ ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲಿಸಿದ್ದರು. ಇನ್ನು ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಮೇ 27ರಂದು ಖುದ್ದಾಗಿ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿದ್ದ ಕೋಟಾ ಶ್ರೀನಿವಾಸ್ ಪೂಜಾರಿ ಅವರಿಗೆ ಹೈಕಮಾಂಡ್ ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಟಿಕೆಟ್ ನೀಡಿದೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ್ ಪೂಜಾರಿ ಅವರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಗೆಲುವಿಗಾಗಿ ಬಿಸಿಲು ಹಗಲು-ರಾತ್ರಿ ಎನ್ನದೇ ಕ್ಷೇತ್ರದಲ್ಲಿ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಸುತ್ತಾಡುತ್ತಿದ್ದಾರೆ. ಇದರ ಮಧ್ಯೆ ಇದೀಗ ಕೋರ್ಟ್ ಸಂಕಷ್ಟ ಎದುರಾಗಿದೆ.

No Comments

Leave A Comment