ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಲೋಕಸಭಾ ಚುನಾವಣೆ 2024: ಬೆಂಗಳೂರಿನಲ್ಲಿ ಮೊದಲ ದಿನವೇ ಮನೆಯಿಂದ 4,459 ಮಂದಿ ಮತದಾನ

ಬೆಂಗಳೂರು: ಮನೆಯಿಂದ ಮತದಾನ (ವಿಎಫ್‌ಹೆಚ್) ಹಂತ-2ರ ಅಡಿಯಲ್ಲಿ ಶನಿವಾರದಿಂದ ಮತದಾನ ಪ್ರಾರಂಭವಾಗಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ 85 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಅಂಗವಿಕಲರಲ್ಲಿ 4,459 ಮಂದಿ ಮನೆಯಿಂದಲೇ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಹದೇವಪುರ, ಬ್ಯಾಟರಾಯನಪುರ, ದಾಸರಹಳ್ಳಿ, ಯಶವಂತಪುರ, ಆನೇಕಲ್, ಬೆಂಗಳೂರು ದಕ್ಷಿಣ ಮತ್ತು ಯಲಹಂಕ ಒಳಗೊಂಡ ಬೆಂಗಳೂರು ನಗರದಲ್ಲಿ ಒಟ್ಟು 824 ಮಂದಿ ಮತದಾನ ಮಾಡಿದ್ದು, ಶೇ 40.31ರಷ್ಟು ಮತದಾನವಾಗಿದೆ.

ಮಾಹಿತಿ ಪ್ರಕಾರ, 16 ಮತದಾರರು ಗೈರುಹಾಜರಾಗಿದ್ದರು ಮತ್ತು ಇಬ್ಬರು ಮತ ಚಲಾಯಿಸಲು ನಿರಾಕರಿಸಿದ್ದಾರೆ. ಮನೆಯಿಂದ ಮತದಾನಕ್ಕೆ ನೋಂದಾಯಿಸಿಕೊಂಡವರಲ್ಲಿ 18 ಮಂದಿ ಸಾವಿಗೀಡಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment