ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದೆಹಲಿಯಲ್ಲಿ ಸತತ ಮೂರನೇ ಬಾರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲುವುದು ಬಿಜೆಪಿ ಟಾರ್ಗೆಟ್; ಕೇಜ್ರಿವಾಲ್ ಪರ ಅನುಕಂಪ ಆಮ್ ಆದ್ಮಿ ಪಕ್ಷಕ್ಕೆ ಆಧಾರ?

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿಯೂ ಸತತ 3 ನೇ ಬಾರಿಗೆ ಜಯಗಳಿಸುವತ್ತ ಬಿಜೆಪಿ ಗಮನ ಹರಿಸಿದೆ. ಇತ್ತ ಕಾಂಗ್ರೆಸ್ ಜೊತೆಗೆ ಚುನಾವಣೆ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷ ಈ ಬಾರಿ ಅರವಿಂದ್ ಬಂಧನಕ್ಕೊಳಗಾಗಿರುವ ಕೇಜ್ರಿವಾಲ್ ಪರ ಅನುಕಂಪದ ಅಲೆಯನ್ನೇ ಮತಗಳನ್ನಾಗಿ ಪರಿವರ್ತಿಸಲು ಯತ್ನಿಸುತ್ತಿದೆ.

ಪೂರ್ವಾಂಚಲಿಗಳು ಮತ್ತು ಮುಸ್ಲಿಮರ ಪ್ರಾಬಲ್ಯವಿರುವ ಈಶಾನ್ಯ ದೆಹಲಿ ಸ್ಥಾನವು ಬಿಹಾರದಿಂದ ಬಂದ ಇಬ್ಬರು ಅಭ್ಯರ್ಥಿಗಳ ನಡುವಿನ ಪ್ರಮುಖ ಹೋರಾಟಕ್ಕೆ ಸಾಕ್ಷಿಯಾಗಲಿದೆ. ಲೋಕಸಭೆಯಲ್ಲಿ ಮೂರನೇ ಅವಧಿಯ ಮೇಲೆ ಕಣ್ಣಿಟ್ಟಿರುವ ಮನೋಜ್ ತಿವಾರಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ, ಆದರೆ ಕಾಂಗ್ರೆಸ್‌ನ ಕನ್ಹಯ್ಯಾ ಕುಮಾರ್ ಅವರು ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದಾರೆ.ಬಿಹಾರದಲ್ಲಿ ಕನ್ಹಯ್ಯ ಕುಮಾರ್ 2019 ರ ಲೋಕಸಭಾ ಚುನಾವಣೆಯಲ್ಲಿ ಸಿಪಿಐ ಪಕ್ಷದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು.

ಹೆಸರನ್ನು ಗೌಪವಾಗಿರಿಸುವಂತೆ ಮನವಿ ಮಾಡಿದ ಬಿಜೆಪಿ ನಾಯಕರೊಬ್ಬರು ಚುನಾವಣೆಗಳ ಬಗ್ಗೆ ಮಾತನಾಡಿದ್ದು, ಬಿಜೆಪಿ ಅಭ್ಯರ್ಥಿ ತಿವಾರಿ ಅವರಿಗೆ ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ ಹಾಗೂ ಕನ್ಹಯ್ಯ ಕುಮಾರ್ ಧ್ರುವೀಕರಣ ಪರಿಣಾಮಗಳನ್ನು ಎದುರಿಸಲಿದ್ದಾರೆ ಎಂದು ಹೇಳಿದ್ದಾರೆ.2025ರಲ್ಲಿ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಗೆ ಮುನ್ನ ನಡೆಯಲಿರುವ ನಿರ್ಣಾಯಕ ಚುನಾವಣೆಯಲ್ಲಿ ಛಾಪು ಮೂಡಿಸಲು ಕುಮಾರ್ ಅವರ ಜನಪ್ರಿಯತೆ ಮತ್ತು ಅವರ ವಾಕ್ಚಾತುರ್ಯವನ್ನು ಬಳಸಿಕೊಳ್ಳಲು ಕಾಂಗ್ರೆಸ್ ಯತ್ನಿಸುತ್ತಿದೆ.
ಪೂರ್ವ ದೆಹಲಿಯಲ್ಲಿ, ಎಎಪಿ ತನ್ನ ದಲಿತ ಶಾಸಕ ಕುಲದೀಪ್ ಕುಮಾರ್ ಅವರನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳು ಸ್ಪರ್ಧಿಸುವ ಕ್ಷೇತ್ರದಿಂದ ಕಣಕ್ಕಿಳಿಸಿದೆ, ಇದು ವಿವಿಧ ಲೋಕಸಭಾ ಸ್ಥಾನಗಳಲ್ಲಿ ಹರಡಿರುವ 12 ಮೀಸಲು ವಿಧಾನಸಭಾ ಕ್ಷೇತ್ರಗಳಲ್ಲಿನ ಸಮುದಾಯದ ಮತದಾರರ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.ಬಿಜೆಪಿಯೊಂದಿಗಿನ ನೇರ ಸ್ಪರ್ಧೆಯ ಲಾಭ ಪಡೆಯುವುದರ ಜೊತೆಗೆ, ಪೂರ್ವ ದೆಹಲಿಯಲ್ಲಿ ದಲಿತ ಮತ್ತು ಮುಸ್ಲಿಂ ಮತದಾರರಲ್ಲಿ ಮೋದಿ ವಿರೋಧಿ ಭಾವನೆ ಇದೆ ಎಂದು ಎಎಪಿ ಹೇಳಿಕೊಂಡಿದೆ, ಅದು ಚುನಾವಣೆಯಲ್ಲಿ ಲಾಭವನ್ನು ನೀಡುತ್ತದೆ ಎಂದು ಆಮ್ ಆದ್ಮಿ ಪಕ್ಷ ವಿಶ್ವಾಸ ಹೊಂದಿದೆ. 2019 ರಲ್ಲಿ, ಗೌತಮ್ ಗಂಭೀರ್ ಕಾಂಗ್ರೆಸ್‌ನ ಅರವಿಂದರ್ ಸಿಂಗ್ ಲವ್ಲಿ ಅವರನ್ನು 3.93 ಲಕ್ಷ ಮತಗಳಿಂದ ಸೋಲಿಸಿ ಸ್ಥಾನವನ್ನು ಗೆದ್ದರು. ಎಎಪಿಯ ಅತಿಶಿ ಸ್ಪರ್ಧೆಯಲ್ಲಿ ಮೂರನೇ ಸ್ಥಾನದಲ್ಲಿದ್ದರು.ಈ ಬಾರಿ ಎಎಪಿ ಮತ್ತು ಕಾಂಗ್ರೆಸ್ ಒಗ್ಗೂಡುವುದರಿಂದ ಬಿಜೆಪಿ ವಿರೋಧಿ ಮತಗಳನ್ನು ಕ್ರೋಢೀಕರಿಸುವ ಸಾಧ್ಯತೆಯಿದೆ ಎಂದು ಎಎಪಿ ನಾಯಕರು ಹೇಳಿದ್ದಾರೆ. ಆದಾಗ್ಯೂ, ದೆಹಲಿಯ ಬಿಜೆಪಿ ನಾಯಕರು 2014 ರಿಂದ ಪಕ್ಷವು ಹೊಂದಿರುವ ಎಲ್ಲಾ ಏಳು ಸ್ಥಾನಗಳನ್ನು ಉಳಿಸಿಕೊಳ್ಳುವ ವಿಶ್ವಾಸ ಹೊಂದಿದ್ದಾರೆ.
No Comments

Leave A Comment