ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಉಡುಪಿ: ಹೂಡೆ ಹಂಪನಕಟ್ಟೆ ಸಮೀಪ ಕಾರು-ಆಟೋ ರಿಕ್ಷಾ ಅಪಘಾತ

ಉಡುಪಿ: ಹಂಪನಕಟ್ಟೆ ಬಳಿ ಕಾರು ಮತ್ತು ರಿಕ್ಷಾ ಅಪಘಾತಗೊಂಡ ಕುರಿತು ವರದಿಯಾಗಿದೆ.

ಈ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳಾಗಿವೆಯೆಂದು ತಿಳಿದು ಬಂದಿದೆ. ರಿಕ್ಷಾ ಹಂಪನಕಟ್ಟೆಯಿಂದ ಸಂತೆಕಟ್ಟೆ ಕಡೆಗೆ ಮತ್ತು ಕಾರು ಸಂತೆಕಟ್ಟೆಯಿಂದ ಬರುತ್ತಿತ್ತು ಎನ್ನಲಾಗಿದೆ.

ಅಪಘಾತಗೊಂಡ ರಭಸಕ್ಕೆ ಕಾರು ಮತ್ತು ರಿಕ್ಷಾ ನಜ್ಜುಗುಜ್ಜಾಗಿದೆ. ಸಂತೆಕಟ್ಟೆ-ಹೂಡೆ ಮುಖ್ಯರಸ್ತೆಯಲ್ಲಿ ಅಪಘಾತ ನಡೆದಿದ್ದು ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

No Comments

Leave A Comment