ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಉಡುಪಿ: ಹೂಡೆ ಹಂಪನಕಟ್ಟೆ ಸಮೀಪ ಕಾರು-ಆಟೋ ರಿಕ್ಷಾ ಅಪಘಾತ
ಉಡುಪಿ: ಹಂಪನಕಟ್ಟೆ ಬಳಿ ಕಾರು ಮತ್ತು ರಿಕ್ಷಾ ಅಪಘಾತಗೊಂಡ ಕುರಿತು ವರದಿಯಾಗಿದೆ.
ಈ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯರ ಸಹಾಯದಿಂದ ಅಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಕರಿದ್ದು ಸಣ್ಣ ಪುಟ್ಟ ಗಾಯಗಳಾಗಿವೆಯೆಂದು ತಿಳಿದು ಬಂದಿದೆ. ರಿಕ್ಷಾ ಹಂಪನಕಟ್ಟೆಯಿಂದ ಸಂತೆಕಟ್ಟೆ ಕಡೆಗೆ ಮತ್ತು ಕಾರು ಸಂತೆಕಟ್ಟೆಯಿಂದ ಬರುತ್ತಿತ್ತು ಎನ್ನಲಾಗಿದೆ.
ಅಪಘಾತಗೊಂಡ ರಭಸಕ್ಕೆ ಕಾರು ಮತ್ತು ರಿಕ್ಷಾ ನಜ್ಜುಗುಜ್ಜಾಗಿದೆ. ಸಂತೆಕಟ್ಟೆ-ಹೂಡೆ ಮುಖ್ಯರಸ್ತೆಯಲ್ಲಿ ಅಪಘಾತ ನಡೆದಿದ್ದು ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.