Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬಾವಿಯೊಳಗೆ ಆಕ್ಸಿಜನ್ ಸಿಗದೇ ರಿಂಗ್ ಕಾರ್ಮಿಕರಿಬ್ಬರು ಮೃತ್ಯು

ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಕ್ಸಿಜನ್ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ.

ಮೃತ ಕಾರ್ಮಿಕರನ್ನು ಪರ್ತಿಪ್ಪಾಡಿ ನಿವಾಸಿ ಇಬ್ರಾಹಿಂ, ಮಲಾರ್ ನಿವಾಸಿ ಆಲಿ ಎಂದು ಗುರುತಿಸಲಾಗಿದೆ.

ಸುಮಾರು 30 ಅಡಿ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಬಾವಿಗೆ ಇಳಿದ ಕಾರ್ಮಿಕ ಆಕ್ಸಿಜನ್ ಕೊರತೆಯಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು ಮೇಲಕ್ಕೆ ಬಾರದಿರುವ ಹಿನ್ನೆಲೆ ಇನ್ನೊಬ್ಬ ಇಳಿದಿದ್ದು, ಈ ವೇಳೆ ಆತನೂ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾನೆ. ಮೃತದೇಹವನ್ನು ವಿಟ್ಲ ಸಮುದಾಯ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

No Comments

Leave A Comment