ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ತಾಂಜಾನಿಯಾದಲ್ಲಿ ಭಾರೀ ಮಳೆ, ಪ್ರವಾಹ – 155 ಜನರು ಮೃತ್ಯು

ಡೋಡೋಮಾ,ಏ.26: ತಾಂಜಾನಿಯಾದಲ್ಲಿ ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದ್ದು, , ಪ್ರವಾಹ ಮತ್ತು ಭೂಕುಸಿತದಿಂದ ಜನತೆ ತತ್ತರಿಸಿದ್ದಾರೆ. ದೇಶದಲ್ಲಿ ಇದುವರೆಗೂ 155 ಜನರು ಸಾವಿಗೀಡಾಗಿದ್ದು, 236 ಮಂದಿ ಗಾಯಗೊಂಡಿದ್ದಾರೆ.

ಪೂರ್ವ ಆಫ್ರಿಕಾದಾದ್ಯಂತ ತೀವ್ರವಾದ ಮಳೆ ಮುಂದುವರಿದಿದೆ. ಎಲ್ ನಿನೋ ಹವಾಮಾನದ ಮಾದರಿಯು ಭಾರೀ ಮಳೆಗೆ ಕಾರಣವಾಗಿದೆ. ಇದರಿಂದಾಗಿ ಪ್ರವಾಹ ಹೆಚ್ಚಾಗಿದೆ. ರಸ್ತೆಗಳು, ಸೇತುವೆಗಳು ಮತ್ತು ರೈಲು ಮಾರ್ಗಗಳು ನಾಶವಾಗಿವೆ ಎಂದು ಪ್ರಧಾನಿ ಕಾಸಿಮ್ ಮಜಲಿವಾ ತಿಳಿಸಿದ್ದಾರೆ.

ಪ್ರವಾಹದಿಂದ 51,000 ಮನೆಗಳಿಗೆ ಹಾನಿಯಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಶಾಲೆಗಳನ್ನು ಮುಚ್ಚಲಾಗಿದೆ. ಜನರ ರಕ್ಷಣೆಗೆ ತುರ್ತು ಸೇವೆ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಸ್ತುತ ಮಳೆಗಾಲದಲ್ಲಿ ಪೂರ್ವ ಆಫ್ರಿಕಾದ ಪ್ರದೇಶವು ವಾಡಿಕೆಗಿಂತ ಹೆಚ್ಚಿನ ಮಳೆಯಿಂದ ಜರ್ಜರಿತವಾಗಿದೆ. ನೆರೆಯ ಬುರುಂಡಿ ಮತ್ತು ಕೀನ್ಯಾದಲ್ಲಿ ಸಹ ಪ್ರವಾಹ ವರದಿಯಾಗಿದೆ.

No Comments

Leave A Comment