ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಕೋಲ್ಕತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶನಿವಾರ ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತುವಾಗ ಕಾಲು ಜಾರಿ ಬಿದ್ದಿದ್ದು, ಘಟನೆಯಲ್ಲಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಿಎಂ ಮಮತಾ ಬ್ಯಾನರ್ಜಿ ಅವರು ದುರ್ಗಾಪುರದಲ್ಲಿ ಹೆಲಿಕಾಪ್ಟರ್ ಹತ್ತಿ ಸೀಟ್ನಲ್ಲಿ ಕುಳಿತುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ತಕ್ಷಣ ಅವರ ಬಳಿಗೆ ರಕ್ಷಣಾ ಸಿಬ್ಬಂದಿಗಳು ಧಾವಿಸಿದ್ದಾರೆ.
ಘಟನೆಯ ನಂತರ ಸಿಎಂ ಮಮತಾ ಬ್ಯಾನರ್ಜಿ ಅವರು ಅಸನ್ಸೋಲ್ಗೆ ಪ್ರಯಾಣ ಬೆಳೆಸಿದ್ದಾರೆ. ಅಸನ್ಸೋಲ್ನಲ್ಲಿ ಟಿಎಂಸಿ ಅಭ್ಯರ್ಥಿ ಶತ್ರುಘ್ನ ಸಿನ್ಹಾ ಅವರ ಪರ ಮಮತಾ ಬ್ಯಾನರ್ಜಿ ಪ್ರಚಾರ ಮಾಡಲಿದ್ದಾರೆ.
ಕಳೆದ ಆರು ವಾರಗಳಲ್ಲಿ ಮಮತಾ ಬ್ಯಾನರ್ಜಿ ಅವರು ಎರಡನೇ ಬಾರಿ ಗಾಯಗೊಂಡಿದ್ದಾರೆ. ಮಾರ್ಚ್ 14 ರಂದು, 69 ವರ್ಷದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಕೋಲ್ಕತ್ತಾದ ತಮ್ಮ ಕಾಲಿಘಾಟ್ ನಿವಾಸದಲ್ಲಿ ಬಿದ್ದು ಅವರ ಹಣೆ ಮತ್ತು ಮೂಗಿನ ಮೇಲೆ ಗಾಯವಾಗಿತ್ತು.