ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಉಡುಪಿಯ ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನ ; ಶ್ರೀರಾಮನಾಮಜಪ ಅಭಿಯಾನಕ್ಕೆ ಚಾಲನೆ…
ಉಡುಪಿ: ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಗುರುಪೀಠಗಳಲ್ಲೊಂದಾದ ಶ್ರೀ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷದ ಆಚರಣೆ ಮತ್ತು ಸಮಾಜದ ಉದ್ಧಾರಕ್ಕಾಗಿ ಹಮ್ಮಿಕೊಂಡ, ಮಠಾಧಿಪತಿಗಳಾದ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ಒಡೆಯರ್ ಸ್ವಾಮೀಜಿ ಅವರಿಂದ ಉಪದೇಶಿಸಲ್ಪಟ್ಟ ಶ್ರೀರಾಮನಾಮಜಪ ಅಭಿಯಾನವು ತಾರೀಕು 10 ಮೇ 2024 ಅಕ್ಷಯ ತೃತೀಯದ ವಿಶೇಷ ದಿನದಂದು ಶ್ರೀದೇವರ ಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ , ಶ್ರೀ ರಾಮದೇವರ ಭಾವ ಚಿತ್ರ ಮೆರವಣಿಗೆಯ ಮೂಲಕ ಶ್ರೀ ಸಚ್ಚಿದಾನಂದ ಸಭಾಗ್ರಹದಲ್ಲಿ ಶ್ರೀರಾಮನಾಮಜಪ ಪ್ರಾರಂಭಗೊಂಡಿತ್ತು .
18 ಅಕ್ಟೋಬರ್ 2025 ರವರೆಗೆ ನಡೆಯುವ ಈ ಅಭಿಯಾನದ ಪ್ರಥಮ ದಿನದ ಮೊದಲನೆಯ ಪಾಳಿಗೆ ನೂರಕ್ಕೂ ಅಧಿಕ ಸಂಖ್ಯೆಯಲ್ಲಿ ಜಪಕರು ತುಂಬಾ ಉತ್ಸಾಹದಿಂದ ಪಾಲ್ಗೊಂಡರು. ಶ್ರೀರಾಮ ನಾಮಜಪ ಅಭಿಯಾನಕ್ಕೆ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನವನ್ನು ಜಪ ಕೇಂದ್ರವನ್ನಾಗಿ ಮಾಡಿ ಕೇಂದ್ರಕ್ಕೆ ಶ್ರೀ “ರಘುನಾಯಕ:” ಎಂದು ನಾಮಕರಿಸಿ ಉಡುಪಿಯ ಎಲ್ಲಾ ಭಜಕರಿಗೆ ಶ್ರೀ ಗುರುಗಳು ವಿಶೇಷ ಅನುಗ್ರಹ ಸಂದೇಶ ನೀಡಿ ಹರಿಸಿದ್ದಾರೆ.
ಶ್ರೀ ರಾಮನಾಮ ಜಪ ಅಭಿಯಾನಕ್ಕೆ ಉಡುಪಿಯ ಸಮಾಜ ಬಾಂಧವರು ಮಾತ್ರವಲ್ಲದೆ ಹತ್ತಿರದ ಊರಿನವರು ಅಂದರೆ ಕಟಪಾಡಿ, ಉದ್ಯಾವರ, ಮುಲ್ಕಿ, ಕಾಪು, ಪಡುಬಿದ್ರೆ, ಮಲ್ಪೆ, ಹಿರಿಯಡ್ಕ, ಹರಿಕಂಡಿಗೆ, ಮಣಿಪಾಲ್, ಕಲ್ಯಾಣಪುರ ಹೀಗೆಲ್ಲಾ ಕಡೆಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಬಂದು ಈ ಜಪದಲ್ಲಿ ಭಾಗವಹಿಸಲು ಅವಕಾಶವಿದೆ.
ಪರವೂರಿನ ಭಕ್ತಾಭಿಮಾನಿಗಳೂ ತಮ್ಮ ಹತ್ತಿರದ ಕೇಂದ್ರಕ್ಕೆ ಹೋಗಿ ಶ್ರೀರಾಮನಾಮ ಜಪಧಲ್ಲಿ ಭಾಗವಹಿಸುವ ಮುಖೇನ ಶ್ರೀದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬಹುದು.
ದಿನಾಂಕ 10 ರಿಂದ 18 ಮೇ 2024 ಪ್ರತಿದಿನ ಸಂಜೆ 4:00 ರಿಂದ 5:30, 19 ಮೇ 2024 ರಿಂದ ಪ್ರತಿದಿನ ಸಂಜೆ 5:45 ರಿಂದ 7:00 ಗಂಟೆಯವರೆಗೆ, ಪ್ರತಿ ಆದಿತ್ಯವಾರ ವಿಶೇಷ ಪಾಳಿ ಬೆಳಗ್ಗೆ 9:30 ರಿಂದ 11:00 ಗಂಟೆಯವರೆಗೆ ಉಡುಪಿಯ ಶ್ರೀದೇವಳದಲ್ಲಿ ಆಯೋಜಿಸಲಾಗಿದೆ. ಈ ಎಲ್ಲಾ ಪಾಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಬೇಕಾಗಿ ರಾಮನಾಮ ಕಮಿಟಿಯ ಸದಸ್ಯರು ವಿನಂತಿಸಿದ್ದಾರೆ. ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನಡೆದ ಶ್ರೀರಾಮನಾಮಜಪ ಅಭಿಯಾನಕ್ಕೆ ಶ್ರೀದೇವಳದ ಆಡಳಿತ ಮೊಕ್ತೇಸರರಾದ ಪಿ ವಿ ಶೆಣೈ ,ವಿಶ್ವನಾಥ ಭಟ್ , ಅರ್ಚಕರಾದ ದಯಾಘನ್ ಭಟ್ , ದೀಪಕ್ ಭಟ್ ಸಹಕರಿಸಿದರು .
ಆಡಳಿತ ಮಂಡಳಿಯ ಸದಸ್ಯರು, ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ ಜಪ ಕಮಿಟಿಯ ಸದಸ್ಯರು, ಯುವಕ ಮಂಡಳಿ ಸದಸ್ಯರು, ಮಹಿಳಾ ಮಂಡಳಿ ಸದಸ್ಯರು ಮತ್ತು ನೂರಾರು ಸಮಾಜ ಬಾಂಧವರು ಈ ಅಭಿಯಾನದಲ್ಲಿ ಭಾಗವಹಿಸಿ ಧನ್ಯತೆ ಪಡೆದರು.