ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

Arvind Kejriwal: ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕು, ನನಗೆ ದೇಶದ 140 ಕೋಟಿ ಜನರ ಬೆಂಬಲ ಬೇಕು: ಕೇಜ್ರಿವಾಲ್

ದೆಹಲಿ ಮೇ 11: ಅಬಕಾರಿ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್ (Supreme Court) ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ ತಿಹಾರ್ ಜೈಲಿನಿಂದ ಹೊರಬಂದ  ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು(ಶನಿವಾರ) ತಮ್ಮ ಮೊದಲ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಆಮ್ ಆದ್ಮಿ ಪಕ್ಷದ ಕೇಂದ್ರ ಕಚೇರಿಯಲ್ಲಿ ತಮ್ಮ ಬೆಂಬಲಿಗರಿಗೆ ಫ್ಲೈಯಿಂಗ್ ಕಿಸ್ ನೀಡಿದ ಸಿಎಂ ಕೇಜ್ರಿವಾಲ್, “ನಿಮ್ಮೆಲ್ಲರ ನಡುವೆ ಮರಳಿ ಬಂದಿದ್ದು ನನಗೆ ತುಂಬಾ ಸಂತೋಷವಾಗಿದೆ. ನಾವು ಒಟ್ಟಾಗಿ ನಮ್ಮ ದೇಶವನ್ನು ಸರ್ವಾಧಿಕಾರದಿಂದ ರಕ್ಷಿಸಬೇಕು, ನಾನು ನನ್ನ ಎಲ್ಲಾ ಶಕ್ತಿಯಿಂದ ಹೋರಾಡುತ್ತೇನೆ, ನನಗೆ ದೇಶದ 140 ಕೋಟಿ ಜನರ ಬೆಂಬಲ ಬೇಕು ಎಂದು ಹೇಳಿದ್ದಾರೆ.

“ಅವರು (ಬಿಜೆಪಿ) ನನ್ನನ್ನು ಜೈಲಿಗೆ ಕಳುಹಿಸಿದ್ದಾರೆ. ಅವರು ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದಾರೆಂದು ಪ್ರಧಾನಿ ಹೇಳುತ್ತಾರೆ. ಆದರೆ ಬಿಜೆಪಿ ತಮ್ಮ ಪಕ್ಷದಲ್ಲಿರುವ ಎಲ್ಲಾ ಭ್ರಷ್ಟರನ್ನು ಸ್ವಾಗತಿಸಿದ್ದಾರೆ. ನೀವು ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬಯಸಿದರೆ, ಅರವಿಂದ್ ಕೇಜ್ರಿವಾಲ್ ಅವರಿಂದ ಕಲಿಯಿರಿ” ಎಂದಿದ್ದಾರೆ ಎಎಪಿ ನಾಯಕ.

“ಮೋದಿ ಜಿ ಅವರಿಗೆ ಅತ್ಯಂತ ಅಪಾಯಕಾರಿ ಮಿಷನ್ ಇದೆ. ಅದೇನೆಂದರೆ ‘ಒಂದು ರಾಷ್ಟ್ರ ಒಂದು ನಾಯಕ’. ಅವರು ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸುತ್ತಾರೆ. ಎಲ್ಲಾ ಬಿಜೆಪಿ ನಾಯಕರನ್ನು ನಿರ್ವಹಿಸುತ್ತಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್ ಹೇಳಿದ್ದಾರೆ.

ಕೇಜ್ರಿವಾಲ್ ಸುದ್ದಿಗೋಷ್ಠಿಯ ಮುಖ್ಯಾಂಶಗಳು

  1. “ಅವರು ಚುನಾವಣೆಯಲ್ಲಿ ಗೆದ್ದರೆ, ಅವರು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು 2 ತಿಂಗಳಲ್ಲಿ ಬದಲಾಯಿಸುತ್ತಾರೆ. ಅವರು ತಮ್ಮ ಪಕ್ಷದ ಎಲ್ಲಾ ಜನಪ್ರಿಯ ನಾಯಕರನ್ನು ಕೊನೆಗೊಳಿಸಲು ಪ್ರಯತ್ನಿಸಿದ್ದಾರೆ. ವಸುಂಧರಾ ರಾಜೆ, ಶಿವರಾಜ್ ಚೌಹಾಣ್ ಅವರನ್ನು ನೋಡಿ…”

  2. ಭಗವಾನ್ ಹನುಮಾನ್ ನಮ್ಮ ಪಕ್ಷವನ್ನು ಆಶೀರ್ವದಿಸಿದ್ದಾನೆ, ಒಂದು ಪವಾಡ ಸಂಭವಿಸಿದೆ, ಅದಕ್ಕಾಗಿಯೇ ನಾನು ನಿಮ್ಮ ಮುಂದೆ ಇದ್ದೇನೆ.

  3. “ನಾನು ದಣಿವಿಲ್ಲದೆ ಕೆಲಸ ಮಾಡುತ್ತೇನೆ, ಮುಂದಿನ 21 ದಿನಗಳಲ್ಲಿ ‘ಸರ್ವಾಧಿಕಾರ’ವನ್ನು ಕೊನೆಗೊಳಿಸಲು ಮತ್ತು ಭಾರತವನ್ನು ಉಳಿಸಲು ದೇಶಾದ್ಯಂತ ಪ್ರಚಾರ ಮಾಡುತ್ತೇನೆ”

  4. ಪಕ್ಷ ವಿಭಜನೆಯಾಗುತ್ತದೆ ಎಂದು ಭಾವಿಸಿ ಅವರು (ಬಿಜೆಪಿ) ನಾಲ್ವರು ಎಎಪಿ ನಾಯಕರನ್ನು ಜೈಲಿಗೆ ಕಳುಹಿಸಿದ್ದಾರೆ. ಆದಾಗ್ಯೂ, ಇದು (ಎಎಪಿ) ಒಂದು ಪಕ್ಷವಲ್ಲ, ಇದು ಒಂದು ಚಿಂತನೆ. ಅವರು  ಮುಗಿಸಲು ಬಯಸಿದ್ದರೆ ಇದು ಹೆಚ್ಚು ವಿಸ್ತರಿಸುತ್ತದೆ. ಪ್ರಧಾನಿಯವರು ಆಮ್ ಆದ್ಮಿ ಪಕ್ಷವನ್ನು ಹತ್ತಿಕ್ಕಲು ಬಯಸುತ್ತಿದ್ದಾರೆ.

  5. ಪ್ರಧಾನಿ ಮೋದಿಯವರು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಬಗ್ಗೆ ಕಲಿಯಲು ಬಯಸಿದರೆ, ಅವರು ಅರವಿಂದ್ ಕೇಜ್ರಿವಾಲ್ ಅವರಿಂದ ಕಲಿಯಬೇಕು; ನಾವು ಭ್ರಷ್ಟರನ್ನು ಜೈಲಿಗೆ ಕಳುಹಿಸಿದ್ದೇವೆ.

  6. ಮೋದಿ ಎಲ್ಲಾ ವಿರೋಧ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸಲು ಪ್ರಧಾನಿ ಬಯಸುತ್ತಿದ್ದಾರೆ. “ಬಿಜೆಪಿ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೆ ಗೆದ್ದರೆ ಕೆಲವೇ ದಿನಗಳಲ್ಲಿ ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್, ಪಿಣರಾಯಿ ವಿಜಯನ್ ಮತ್ತು ಇತರ ಹಲವಾರು ವಿರೋಧ ಪಕ್ಷದ ನಾಯಕರು ಜೈಲು ಪಾಲಾಗುತ್ತಾರೆ.

  7. “ನಾನು ಬಿಜೆಪಿಯವರಲ್ಲಿ ಕೇಳುತ್ತೇನೆ, ನಿಮ್ಮ ಪ್ರಧಾನಿ ಯಾರು? ಅವರು ಮುಂದಿನ ಸೆಪ್ಟೆಂಬರ್‌ನಲ್ಲಿ 75 ವರ್ಷಕ್ಕೆ ಕಾಲಿಡುತ್ತಿದ್ದಾರೆ. 75 ವರ್ಷ ವಯಸ್ಸಿನವರು ನಿವೃತ್ತಿ ಹೊಂದಬೇಕು ಎಂಬ ನಿಯಮವನ್ನು ಅವರೇ ಮಾಡಿದ್ದಾರೆ. ಅವರು ಮುಂದಿನ ವರ್ಷ ನಿವೃತ್ತರಾಗಬೇಕು. ನಾನು ಬಿಜೆಪಿಯನ್ನು ಕೇಳುತ್ತೇನೆ. ನಿಮ್ಮ ಪ್ರಧಾನಿ ಆಯ್ಕೆ ಯಾವುದು?”

  8. ಮೋದಿಯವರ ಗ್ಯಾರಂಟಿಯನ್ನು ಯಾರು ಪೂರೈಸುತ್ತಾರೆ? ಅಮಿತ್ ಶಾ ಅದನ್ನು ಮಾಡುತ್ತಾರೆಯೇ? ನೀವು ಮತ ಚಲಾಯಿಸಲು ಹೊರಟಾಗ ನೆನಪಿಡಿ, ನೀವು ಅಮಿತ್ ಶಾ, ಮೋದಿಗೆ ಮತ ಹಾಕುತ್ತಿಲ್ಲ.

  9. ‘ಜೂನ್ 4 ರಂದು ಬಿಜೆಪಿ ಸರ್ಕಾರ ರಚಿಸುತ್ತಿಲ್ಲ ಎಂಬುದು ನನ್ನ ಲೆಕ್ಕಾಚಾರ. ನನ್ನ ಲೆಕ್ಕಾಚಾರ ಪ್ರಕಾರ ಬಿಜೆಪಿ 220-230 ಸ್ಥಾನಗಳನ್ನು ಪಡೆಯಲಿದ.ಇಂಡಿಯಾ ಬಣ ಸರ್ಕಾರ ರಚಿಸುತ್ತದೆ ಮತ್ತು ಎಎಪಿ ಆ ಸರ್ಕಾರದ ಭಾಗವಾಗಲಿದೆ. ನಾವು ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡುತ್ತೇವೆ. ದೆಹಲಿಗೆ ಜನರ ಅಧಿಕಾರ ಇರುತ್ತದೆ, ಗುಜರಾತ್‌ನ ವ್ಯಕ್ತಿಯದ್ದಲ್ಲ.

  10. ನನ್ನನ್ನು ಬಂಧಿಸಿದಾಗ ನಾನೇಕೆ ರಾಜೀನಾಮೆ ನೀಡಲಿಲ್ಲ? ದೆಹಲಿಯಲ್ಲಿ ಎಎಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಮುಂದಿನ 20 ವರ್ಷಗಳ ಕಾಲ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಅವರಿಗೆ ತಿಳಿದಿದೆ. ನಾನು ರಾಜೀನಾಮೆ ನೀಡಿ ಎಎಪಿ ಸರ್ಕಾರ ಪತನವಾಗುವಂತೆ ಪಿತೂರಿ ನಡೆಸಿದ್ದಾರೆ. ನಾನು ರಾಜೀನಾಮೆ ನೀಡುವುದಿಲ್ಲ, ಜೈಲಿನಿಂದಲೇ ಸರ್ಕಾರ ನಡೆಸುತ್ತೇನೆ ಎಂದಿದ್ದೆ. ಹೇಮಂತ್ ಸೋರೆನ್ ಕೂಡ ರಾಜೀನಾಮೆ ನೀಡಬಾರದಿತ್ತು ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸುಮಾರು 50 ದಿನಗಳ ಬಂಧನದ ನಂತರ ಶುಕ್ರವಾರ ಸಂಜೆ 7 ಗಂಟೆಗೆ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಿಂದ (Tihar Jail) ಹೊರಬಂದಿದ್ದಾರೆ. ಜೈಲಿನಿಂದ ಹೊರಬಂದ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂಕೋರ್ಟ್ ನ್ಯಾಯಾಧೀಶರಿಗೆ ಧನ್ಯವಾದ ತಿಳಿಸಿದ್ದು, “ನಾವು ಸರ್ವಾಧಿಕಾರದಿಂದ ದೇಶವನ್ನು ಉಳಿಸಬೇಕಾಗಿದೆ” ಎಂದು ನಾನು ನಿಮ್ಮೆಲ್ಲರಲ್ಲಿ ಒಂದೇ ಒಂದು ಮನವಿಯನ್ನು ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

kiniudupi@rediffmail.com

No Comments

Leave A Comment