ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಛತ್ತೀಸ್ಗಢ: ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು
ಕವರ್ಧಾ, ಮೇ.20: ಛತ್ತೀಸ್ಗಢದ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.
ಬೈಗಾ ಬುಡಕಟ್ಟು ಸಮುದಾಯದ 25-30 ಜನರು ತೆಂಡು ಎಲೆಗಳನ್ನು ತರಲು ಪಿಕಪ್ನಲ್ಲಿ ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಬಹಪಾನಿ ಪ್ರದೇಶದ ಬಳಿ 20 ಅಡಿ ಆಳದ ಕಂದಕಕ್ಕೆ ವಾಹನ ಬಿದ್ದಿದೆ ಎಂದು ಹೇಳಲಾಗಿದೆ. ಬೈಗಾ ಸಮುದಾಯದವರು ಬೀಡಿ ತಯಾರಿಸುವ ವೃತ್ತಿಯನ್ನು ಮಾಡುತ್ತಿದ್ದರು. ಇದಕ್ಕೆ ತೆಂಡು ಎಲೆಗಳು ಬೇಕಿತ್ತು. ಇದನ್ನು ತರಲು ಪಿಕಪ್ನಲ್ಲಿ ಹೋಗಿದ್ದಾರೆ. ಈ ವೇಳೆ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ.
ಈ ಘಟನೆಯಿಂದ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆಯಿಂದ ಸಾವನ್ನಪ್ಪಿರುವವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ಕಳುಹಿಸಲಾಗಿದೆ.