ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಅಂಜಲಿ ಕೊಲೆ ಪ್ರಕರಣ: ಸಿಐಡಿ ಅಧಿಕಾರಿಗಳ ಬಳಿ ಹತ್ಯೆ ರಹಸ್ಯ ಬಾಯ್ಬಿಟ್ಟ ಹಂತಕ ವಿಶ್ವ

ಹುಬ್ಬಳ್ಳಿ, ಮೇ 22: ಹುಬ್ಬಳ್ಳಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ, ಕೊಲೆಯ ರಹಸ್ಯದ ಬಗ್ಗೆ ವಿಶ್ವ ಬಾಯ್ಬಿಟ್ಟಿದ್ದಾನೆ. ಕೊಲೆ ಮಾಡಿ ಪರಾರಿಯಾಗುತ್ತಿದ್ದಾಗ ರೈಲಿನಲ್ಲಿ ಕಿರಿಕ್ ಮಾಡಿ ತಪ್ಪಿಸಲು ಯತ್ನಿಸಿ ಗಂಭೀರವಾಗಿ ಗಾಯಗೊಂಡ ಸ್ಥಿತಿಯಲ್ಲಿ ವಿಶ್ವ ಪೊಲೀಸ್ ಬಲೆಗೆ ಬಿದ್ದಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಘಟನೆಯ ತನಖೆಯ ಹೊಣೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಅದರಂತೆ, ನ್ಯಾಯಾಲಯದ ಅನುಮತಿ ಪಡೆದು ಕಿಮ್ಸ್‌ ಆಸ್ಪತ್ರೆಗೆ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ಆಗಮಿಸಿರುವ ಸಿಐಡಿ ಎಸ್‌ಪಿ ವೆಂಕಟೇಶ್‌ ನೇತೃತ್ವದ ಅಧಿಕಾರಿಗಳ ತಂಡ ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿತು.

ತನಿಖಾಧಿಕಾರಿಗಳ ಬಳಿ ಮಾತನಾಡಿದ ವಿಶ್ವ, ಅಂಜಲಿಯನ್ನು ನಾನು ಮೈಸೂರಿಗೆ ಬಾ ಎಂದು ಕರೆದೆ. ಆಕೆ ಬರಲಿಲ್ಲ. ಹಾಗಾಗಿ ಕೊಲೆ ಮಾಡಿದೆ ಎಂದಿದ್ದಾನೆ.

ಅಂಜಲಿ ಕೊಲೆಯಾಗುವ ಹಿಂದಿನ ದಿನವೇ ಅಂಜಲಿಗೆ ವಿಶ್ವ 1000 ರೂಪಾಯಿ ಫೋನ್ ಪೇ ಮಾಡಿದ್ದ. 1000 ಹಣ ತೆಗೆದುಕೊಂಡು ನಂತರ ಆಕೆ ಆತನನ್ನು ಬ್ಲಾಕ್ ಮಾಡಿದ್ದಳು. ಅದೇ ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದೇನೆ ಎಂದು ವಿಶ್ವ ಸಿಐಡಿ ಅಧಿಕಾರಿಗಳ ಬಳಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಹುಬ್ಬಳ್ಳಿಯ ವೀರಾಪುರ ಓಣಿಯಲ್ಲಿ ಮೇ 15ರಂದು ನಸುಕಿನಲ್ಲಿ ಅಂಜಲಿ ಹತ್ಯೆ ಮಾಡಲಾಗಿತ್ತು. ಏಪ್ರಿಲ್ 18ರಂದು ನಡೆದಿದ್ದ ನೇಹಾ ಹಿರೇಮಠ ಹತ್ಯೆ ರೀತಿಯಲ್ಲಿಯೇ ಅಂಜಲಿಯನ್ನು ಕೊಲೆ ಮಾಡಲಾಗಿತ್ತು. ಇದಕ್ಕೂ ಮುನ್ನ ಆರೋಪಿಯು ಅಂಜಲಿಗೆ ನೇಹಾ ಕೊಲೆಯಾದಂತೆಯೇ ನಿನ್ನ ಹತ್ಯೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಆರೋಪಿ ವಿಶ್ವ ಅಂಜಲಿಗೆ ಧಮ್ಕಿ ಹಾಕಿದ್ದ ವಿಚಾರವಾಗಿ ಆಕೆಯ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಹೆಚ್ಚು ಪ್ರಾಶಸ್ತ್ಯ ನೀಡದ ಪೊಲೀಸರು, ಇದೆಲ್ಲ ಮೂಢನಂಬಿಕೆ ಎಂದು ಹೇಳಿ ಕಳುಹಿಸಿದ್ದರು ಎನ್ನಲಾಗಿತ್ತು. ಈ ಕೊಲೆ ರಾಜ್ಯದಾದ್ಯಂತ ಸಂಚಲನಕ್ಕೆ ಕಾರಣವಾಗಿದ್ದಲ್ಲದೆ, ಕಾನೂನು ಸುವ್ಯವಸ್ಥೆ ವಿಚಾರವಾಗಿ ಸರ್ಕಾರವನ್ನೂ ಮುಜುಗರಕ್ಕೀಡು ಮಾಡಿತ್ತು.

kiniudupi@rediffmail.com

No Comments

Leave A Comment