ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಪರಮೇಶ್ವರ್ ತವರು ಕ್ಷೇತ್ರದಲ್ಲಿ ಯೋಧನ ಮೇಲೆ ಮದ್ಯದ ಬಾಟಲಿಯಿಂದ ಮಾರಣಾಂತಿಕ ಹಲ್ಲೆ

ತುಮಕೂರು, ಮೇ 24: ದಾರಿ ಬಿಡಿ ಎಂದಿದ್ದಕ್ಕೆ ಯೋಧನ  ಮೇಲೆ ಪುಂಡರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಕೊರಟಗೆರೆ  ತಾಲೂಕಿನ ಬೈರೇನಹಳ್ಳಿ ಕ್ರಾಸ್​ಬಳಿ ನಡೆದಿದೆ. ಗೋವಿಂದರಾಜು (30) ಹಲ್ಲೆಗೊಳಗಾದ ಯೋಧ. ಭರತ್, ಪುನೀತ್​, ಗೌರಿಶಂಕರ, ಶಿವಾ, ದಿಲೀಪ್ ಎಂಬುವರಿಂದ ಹಲ್ಲೆ ಮಾಡಿದ ಪುಂಡರು.

ಯೋಧ ಗೋವಿಂದರಾಜು ಅವರು ಜಮ್ಮುಕಾಶ್ಮಿರದ ರಜೌರಿನಲ್ಲಿ ಭಾರತೀಯ ಭೂಸೇನೆ ಸಿಪಾಯಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ರಜೆಯ ಮೇಲೆ ಊರಿಗೆ ಬಂದಿದ್ದು, ಬೈರೇನಹಳ್ಳಿ ಕ್ರಾಸ್​ಗೆ ಬರುತ್ತಿದ್ದರು. ಈ ವೇಳೆ ದಾರಿ ಮಧ್ಯೆ ನಿಂತಿದ್ದವರಿಗೆ ಯೋಧ ಗೋವಿಂದರಾಜು ಅವರು ದಾರಿ ಬಿಡಿ ಎಂದಿದ್ದಾರೆ.

ಈ ವೇಳೆ ಕುಡಿದ ಮತ್ತಲ್ಲಿ ಐವರು ಮದ್ಯದ ಬಾಟಲಿಯಿಂದ ಯೋಧ ಗೋವಿಂದರಾಜು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕೊರಟಗೆರೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment