ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ವಿಚಾರಣೆಗೆಂದು ಕರೆತಂದಾಗ ಕುಸಿದುಬಿದ್ದು ಸಾವನ್ನಪ್ಪಿದ ಘಟನೆ-ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ಉದ್ರಿಕ್ತ ಗುಂಪಿನ ದಾಳಿ
ದಾವಣಗೆರೆ: ಜಿಲ್ಲೆಯ ಚನ್ನಗಿರಿ ಪ್ರಟ್ಟಣದಲ್ಲಿ ನಿನ್ನೆ ಲಾಕಪ್ ಡೆತ್ (lock up death) ಸಂಭವಿಸಿದೆ ಎಂಬ ಆರೋಪ ಕೇಳಿಬರುತ್ತಿದೆ. ನಿನ್ನೆ ವ್ಯಕ್ತಿಯೊಬ್ಬನನ್ನು ವಿಚಾರಣೆಗೆಂದು ಪೊಲೀಸರು ಇಲ್ಲಿ ಕಾಣುತ್ತಿರುವ ಪೊಲೀಸ್ ಠಾಣೆಗೆ ಕರೆತಂದಾಗ ಅವನು ಕುಸಿದುಬಿದ್ದು ಸಾವನ್ನಪ್ಪಿದ್ದಾನೆ.
ಪೊಲೀಸರು ಬಂಧಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಕಾರಣ ಅವನು ಸತ್ತಿದ್ದಾನೆ ಎಂದು ಅರೋಪಿಸಿ ಸುಮಾರು ನೂರು ಜನ ಪೊಲೀಸ್ ಠಾಣೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಟಿವಿ9 ದಾವಣೆಗೆರೆ ವರದಿಗಾರ ಘಟನೆಯ ಸಂಪೂರ್ಣ ಚಿತ್ರಣ ನೀಡಿದ್ದಾರೆ. ಈ ಪೊಲೀಸ್ ಠಾಣೆ ಪಕ್ಕದಲ್ಲೇ ಡಿವೈಎಸ್ಪಿ ಕಚೇರಿ ಇದ್ದು ಆವರಣದಲ್ಲಿದ್ದ ಪೊಲೀಸ್ ವಾಹನಗಳನ್ನು ಉದ್ರಿಕ್ತ ಗುಂಪು ಜಖಂಗೊಳಿಸಿದೆ.
ಠಾಣೆಯ ಮೇಲೆ ಕಲ್ಲು ತೂರಾಟ ನಡೆದಿದ್ದು ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ. ಆವರಣದಲ್ಲಿದ್ದ ದ್ವಿಚಕ್ರವಾಹನ, ಎಸಿ ಮತ್ತು ಧ್ವಜಕಟ್ಟೆಯ ಮೇಲೂ ಗುಂಪು ದಾಳಿ ಮಾಡಿದೆ. ಗಲಭೆಯಲ್ಲಿ 11 ಪೊಲೀಸರು ಸಹ ಗಾಯಗೊಂಡಿದ್ದಾರೆ ಮತ್ತು ಅವರಿಗೆ ಚಿಕಿತ್ಸೆ ಒದಗಿಸಲಾಗಿದೆ. ಇಂಥ ಗಲಭೆಗಳು ನಡೆಯುವಾಗ ಪೊಲೀಸರು ಏನೂ ಮಾಡಲಾಗಲ್ಲವೇ? ಅಶ್ರವಾಯು ಸಿಡಿಸುವುದು ಅಥವಾ ಲಾಠಿ ಚಾರ್ಜ್ ಮಾಡಬೇಕಾದರೆ ಅವರಿಗೆ ಮೇಲಿಂದ ಆದೇಶ ಬರಬೇಕು. ಲಾಕಪ್ ಡೆತ್ ತನಿಖೆಯಾಗಬೇಕು ಅದು ಬೇರೆ ವಿಷಯ, ಆದರೆ ಉದ್ರಿಕ್ತ ಗುಂಪು ಹೀಗೆ ಪೊಲೀಸ್ ಠಾಣೆಯ ಮೇಲೆಯೇ ದಾಳಿ ನಡೆಸುವುದು ಯಾವ ಕಾರಣಕ್ಕೂ ಸಮರ್ಥನೀಯವಲ್ಲ.