ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಜುವೆಲ್ಲರಿ ಅಂಗಡಿ ಮೇಲೆ ಐಟಿ ದಾಳಿ- 26 ಕೋಟಿ ರೂ. ನಗದು ಹಣ ಜಪ್ತಿ

ಮುಂಬೈ, ಮೇ 26 : ಆದಾಯ ತೆರಿಗೆ ಇಲಾಖೆ ನಾಸಿಕ್‌ನಲ್ಲಿರುವ ಪ್ರಸಿದ್ಧ ಜುವೆಲ್ಲರಿ ಅಂಗಡಿ ಮೇಲೆ ದಾಳಿ ನಡೆಸಿ 26 ಕೋಟಿ ರೂ. ನಗದು ಹಣವನ್ನು ಜಪ್ತಿ ಮಾಡಿದೆ.

ಅಕ್ರಮ ವಹಿವಾಟು ನಡೆಸಿದ ಆರೋಪದ ಮೇಲೆ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಿದೆ. ಈ ವೇಳೆ 26 ಕೋಟಿ ರೂ. ನಗದು, 90 ಕೋಟಿ ರೂ. ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತಿನ ದಾಖಲೆಗಳನ್ನು ವಶಪಡಿಸಿಕೊಂಡಿದೆ.

ನಗದು ಹಣವನ್ನು ಹಲವು ಚೀಲಗಳಲ್ಲಿ ತುಂಬಿ ಇಡಲಾಗಿತ್ತು. ಅಧಿಕಾರಿಗಳು ಕಚೇರಿಗೆ ತಂದು ಜೋಡಿಸುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್‌ ಆಗಿದೆ.

kiniudupi@rediffmail.com

No Comments

Leave A Comment