Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಳ್ಳಾಲ: ಮಳೆಯ ಆರ್ಭಟಕ್ಕೆ ಆವರಣಗೊಡೆ ಕುಸಿತ : ಎರಡು ಕಾರು ಜಖಂ

ಮಂಗಳೂರು ಮೇ 26: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ.  ಸುರಿದ ಭಾರೀ ಮಳೆಗೆ ಆವರಣಗೊಡೆ ಕುಸಿದು ಬಿದ್ದ ಪರಿಣಾಮ  ಎರಡು ಕಾರುಗಳು ಜಖಂಗೊಂಡಿರುವ ಘಟನೆ ದೇರಳಕಟ್ಟೆ ಯೇನೆಪೋಯ ಆಸ್ಪತ್ರೆ ಬಳಿ ಮರದ ಮಿಲ್‌ನ ಬಳಿ ನಡೆದಿದೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಆವರಣಗೋಡೆ ಒದ್ದೆಯಾಗಿತ್ತು. ಯೇನೆಪೋಯ ಆಸ್ಪತ್ರೆಯ ವೈದ್ಯರು ಹಾಗೂ ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದುಕೊಂಡು ಬಂದಿದ್ದ ಕೇರಳದ ಕುಟುಂಬವೊಂದು ಆವರಣ ಗೋಡೆ ಪಕ್ಕ ಕಾರು ನಿಲ್ಲಿಸಿದ್ದರು. ಆವರಣ ಗೋಡೆಯ ಕೆಂಪುಕಲ್ಲುಗಳಡಿ ಸಿಲುಕಿ ಈ ಕಾರುಗಳ ಗಾಜುಗಳು ನಜ್ಜುಗುಜ್ಜಾಗಿವೆ.

 ಸ್ಥಳದಲ್ಲಿದ್ದ ಬೇಲ್‍ಪುರಿ ಮಾರಾಟದ ಗಾಡಿ ಕಲ್ಲಿನಡಿಗೆ ಸಿಕ್ಕಿ ಸಂಪೂರ್ಣ ಹಾನಿಗೊಂಡಿದೆ. ಬೇಲ್‍ಪುರಿ ಮಾರುವವ ಎರಡು ದಿನಗಳ ಹಿಂದೆ ಸ್ಥಳಕ್ಕೆ ₹ 15 ಸಾವಿರ ಪಾವತಿ ಮಾಡಿ ಆವರಣ ಗೋಡೆ ಪಕ್ಕದಲ್ಲಿ ಕೈಗಾಡಿಯನ್ನು ನಿಲ್ಲಿಸಿದ್ದ. ಆ ಕೈಗಾಡಿ ಕಲ್ಲುಗಳ ಅಡಿ ಸಿಲುಕಿ ಅಪ್ಪಚ್ಚಿಯಾಗಿದೆ ಎಂದು ತಿಳಿದು ಬಂದಿದೆ.

No Comments

Leave A Comment