Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 9 ಕೆಜಿ ಚಿನ್ನ ಕಳ್ಳ ಸಾಗಣೆ: ಇಬ್ಬರು ಮಹಿಳೆಯರ ಬಂಧನ

ಬೆಂಗಳೂರು: ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬಂಧನಕ್ಕೊಳಪಡಿಸಿದ್ದು, 6 ಕೋಟಿ ರೂಪಾಯಿ ಮೌಲ್ಯದ 9 ಕೆಜಿಗೂ ಅಧಿಕ ಚಿನ್ನಾಭರಣವನ್ನು ವಶಕ್ಕೆ ಪಡದಿದ್ದಾರೆ.

ಬಂಧಿತ ಇಬ್ಬರು ಮಹಿಳೆಯರು ಪಶ್ಚಿಮ ಬಂಗಾಳ ಹಾಗೂ ಹರಿಯಾಣ ಮೂಲದವರೆಂದು ತಿಳಿದುಬಂದಿದೆ. ಜೂನ್‌ 4 ರಂದು ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬರುತ್ತಿರುವ ಥಾಯ್‌ ಏರ್‌ವೇಸ್‌ ವಿಮಾನದಲ್ಲಿ ಚಿನ್ನ ಕಳ್ಳಸಾಗಣಿಗೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿತ್ತು. ಮಾಹಿತಿ ಆಧಾರದ ಮೇಲೆ ತಪಸಣೆ ನಡೆಸಿದಾಗ ಹ್ಯಾಂಡ್‌ ಬ್ಯಾಗ್‌ನಲ್ಲಿ ಗಟ್ಟಿ ಹಾಗೂ ಕಚ್ಚಾ ರೂಪದಲ್ಲಿ 6.8 ಕೆ.ಜಿ ಚಿನ್ನ ಪತ್ತೆಯಾಗಿದೆ.

ವಿಮಾನ ನಿಲ್ದಾಣದಲ್ಲೇ ಬಿಟ್ಟು ಹೋಗಿದ್ದ ಹ್ಯಾಂಡ್‌ಬ್ಯಾಗ್‌ನಲ್ಲಿ ಸಿಕ್ಕ ದಾಖಲೆಯ ಆಧಾರದಲ್ಲಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. 4.77 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದ್ದು, ತನಿಖೆ ಮುಂದುವರಿದಿದೆ.

ಇದಾದ ಕೆಲವೇ ಹೊತ್ತಿನಲ್ಲಿ ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಎಮಿರೇಟ್ಸ್‌ ವಿಮಾನದಲ್ಲಿ ತಪಾಸಣೆ ನಡೆಸಿದಾಗ ಗಟ್ಟಿ ರೂಪದ 2.18 ಕೆ.ಜಿ ಚಿನ್ನ ಸಿಕ್ಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

No Comments

Leave A Comment