ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಕಾಪು: ಯುವಕ ನಾಪತ್ತೆ : ದ್ವಿಚಕ್ರವಾಹನ ಮೊಬೈಲ್, ಪರ್ಸ್ ಕಡಲ ತೀರದಲ್ಲಿ ಪತ್ತೆ
ಕಾಪು: ಕಾಪು ಬೀಚ್ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.
ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್ ಎಂಬವರ ಪುತ್ರ 20ರ ಹರೆಯದ ಕರಣ್ ಸಾಲ್ಯಾನ್ ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿಯಿಂದ ಕರಣ್ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಹುಡುಕಿದಾಗ ಕಾಪು ಬೀಚ್ನಲ್ಲಿ ಅವನ ಮೊಬೈಲ್ ಮತ್ತು ಮೊಬೈಲ್, ಪರ್ಸ್ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಕರಣ್ ಸಾಲ್ಯಾನ್ ರವರ ತಾಯಿ ತುಳಸಿ ಸಾಲ್ಯಾನ್ ನೀಡಿದ ದೂರಿನ ಪ್ರಕಾರ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.