ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಕಾಪು: ಯುವಕ ನಾಪತ್ತೆ : ದ್ವಿಚಕ್ರವಾಹನ ಮೊಬೈಲ್, ಪರ್ಸ್ ಕಡಲ ತೀರದಲ್ಲಿ ಪತ್ತೆ

ಕಾಪು: ಕಾಪು ಬೀಚ್‌ನಲ್ಲಿ ಯುವಕನೋರ್ವ ದ್ವಿಚಕ್ರ ವಾಹನ, ಮೊಬೈಲ್‌ ಜೊತೆಗೆ ಬೆಲೆಬಾಳುವ ವಸ್ತುಗಳನ್ನು ಬಿಟ್ಟು ನಾಪತ್ತೆಯಾಗಿದ್ದು, ನಿನ್ನೆಯಿಂದ ಅವನಿಗಾಗಿ ಬೀಚ್‌ನುದ್ದಕ್ಕೂ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ನಾಪತ್ತೆಯಾಗಿರುವ ಯುವಕನನ್ನು ಕಾಪು ಪಡುಗ್ರಾಮ ನಿವಾಸಿ ತುಳಸಿ ಸಾಲ್ಯಾನ್‌ ಎಂಬವರ ಪುತ್ರ 20ರ ಹರೆಯದ ಕರಣ್‌ ಸಾಲ್ಯಾನ್‌ ಎಂದು ಗುರುತಿಸಲಾಗಿದೆ.

ಗುರುವಾರ ರಾತ್ರಿಯಿಂದ ಕರಣ್ ನಾಪತ್ತೆಯಾಗಿದ್ದು, ಶುಕ್ರವಾರ ಬೆಳಗ್ಗೆ ಹುಡುಕಿದಾಗ ಕಾಪು ಬೀಚ್‌ನಲ್ಲಿ ಅವನ ಮೊಬೈಲ್‌ ಮತ್ತು ಮೊಬೈಲ್‌, ಪರ್ಸ್‌ ಅನಾಥ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕರಣ್ ಸಾಲ್ಯಾನ್ ರವರ ತಾಯಿ ತುಳಸಿ ಸಾಲ್ಯಾನ್‌ ನೀಡಿದ ದೂರಿನ ಪ್ರಕಾರ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.

No Comments

Leave A Comment