ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಣಿಪುರ: ಸಿಎಂ ಎನ್ ಬಿರೇನ್ ಸಿಂಗ್ ಬಂಗಲೆ ಬಳಿ ಭಾರೀ ಅಗ್ನಿ ಅವಘಡ!

ಗುವಾಹಟಿ: ಮಣಿಪುರದ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದು ಬಾಬುಪಾರಾದಲ್ಲಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯ ಇನ್ನೊಂದು ಬದಿಯಲ್ಲಿದೆ. ರಾಜ್ಯ ಸಚಿವಾಲಯವೂ ಸಮೀಪದಲ್ಲಿದ್ದು, ಹೆಚ್ಚಿನ ಭದ್ರತೆ ಹೊಂದಿರುವ ಪ್ರದೇಶವಾಗಿದೆ.

ಈ ಕಟ್ಟಡ ಗೋವಾದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಮಾಜಿ ಐಎಎಸ್ ಅಧಿಕಾರಿ ತಂಗ್ಖೋಪಾವೊ ಕಿಪ್ಗೆನ್ ಅವರ ಕುಟುಂಬದ ಒಡೆತನದಲ್ಲಿದೆ. ಅವರು 2005 ರಲ್ಲಿ ನಿಧನರಾದರು.ಕಳೆದ ವರ್ಷದಿಂದ ಕಟ್ಟಡವನ್ನು ಅನಾಥವಾಗಿ ಬಿಡಲಾಗಿದೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ತಕ್ಷಣ ಮೂರು ಅಗ್ವಿಶಾಮಕ ವಾಹನಗಳು ಸ್ಥಳಕ್ಕೆ ಧಾರಿವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.

ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮಣಿಪುರದಲ್ಲಿ ಹಿಂಸಾಚಾರ ನಡೆದಾಗಿನಿಂದ ಮನೆಯನ್ನು ಅನಾಥವಾಗಿ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಬೆಂಕಿಯ ಪರಿಣಾಮವಾಗಿ, ಮನೆಯ ಮೊದಲ ಮಹಡಿ ಭಾಗಶಃ ಸುಟ್ಟುಹೋಗಿದೆ, ಬೆಂಕಿಗೆ ನಿಖರವಾದ ಕಾರಣ ತಿಳಿದಿಲ್ಲ. ಘಟನೆಯ ಸತ್ಯತೆ ಕಂಡುಹಿಡಿಯಲು ತನಿಖೆಗಾಗಿ ಇಂಫಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

No Comments

Leave A Comment