ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಮಣಿಪುರ: ಸಿಎಂ ಎನ್ ಬಿರೇನ್ ಸಿಂಗ್ ಬಂಗಲೆ ಬಳಿ ಭಾರೀ ಅಗ್ನಿ ಅವಘಡ!
ಗುವಾಹಟಿ: ಮಣಿಪುರದ ಮಾಜಿ ಐಎಎಸ್ ಅಧಿಕಾರಿಯೊಬ್ಬರ ಮನೆಯಲ್ಲಿ ಶನಿವಾರ ಸಂಜೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಇದು ಬಾಬುಪಾರಾದಲ್ಲಿರುವ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯ ಇನ್ನೊಂದು ಬದಿಯಲ್ಲಿದೆ. ರಾಜ್ಯ ಸಚಿವಾಲಯವೂ ಸಮೀಪದಲ್ಲಿದ್ದು, ಹೆಚ್ಚಿನ ಭದ್ರತೆ ಹೊಂದಿರುವ ಪ್ರದೇಶವಾಗಿದೆ.
ಈ ಕಟ್ಟಡ ಗೋವಾದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಮಾಜಿ ಐಎಎಸ್ ಅಧಿಕಾರಿ ತಂಗ್ಖೋಪಾವೊ ಕಿಪ್ಗೆನ್ ಅವರ ಕುಟುಂಬದ ಒಡೆತನದಲ್ಲಿದೆ. ಅವರು 2005 ರಲ್ಲಿ ನಿಧನರಾದರು.ಕಳೆದ ವರ್ಷದಿಂದ ಕಟ್ಟಡವನ್ನು ಅನಾಥವಾಗಿ ಬಿಡಲಾಗಿದೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದ ತಕ್ಷಣ ಮೂರು ಅಗ್ವಿಶಾಮಕ ವಾಹನಗಳು ಸ್ಥಳಕ್ಕೆ ಧಾರಿವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.
ಬೆಂಕಿ ಅವಘಡಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಮಣಿಪುರದಲ್ಲಿ ಹಿಂಸಾಚಾರ ನಡೆದಾಗಿನಿಂದ ಮನೆಯನ್ನು ಅನಾಥವಾಗಿ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ಬೆಂಕಿಯ ಪರಿಣಾಮವಾಗಿ, ಮನೆಯ ಮೊದಲ ಮಹಡಿ ಭಾಗಶಃ ಸುಟ್ಟುಹೋಗಿದೆ, ಬೆಂಕಿಗೆ ನಿಖರವಾದ ಕಾರಣ ತಿಳಿದಿಲ್ಲ. ಘಟನೆಯ ಸತ್ಯತೆ ಕಂಡುಹಿಡಿಯಲು ತನಿಖೆಗಾಗಿ ಇಂಫಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.