ಉಡುಪಿ: ಉಡುಪಿಯ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ಕಾರ್ತಿಕಮಾಸದಲ್ಲಿ ನಡೆಯಲಿರುವ ಲಕ್ಷದೀಪೋತ್ಸವವು ನವೆ೦ಬರ್ 7ರ ಶುಕ್ರವಾರದ೦ದು ಜರಗಲಿದೆ. ವನಪೂಜೆ,ಮಧ್ಯಾಹ್ನ ಪೂಜೆ,ವನಭೋಜನ,ರಾತ್ರಿಪೂಜೆ, ಕೆರೆಉತ್ಸವದೊ೦ದಿಗೆ ಪೇಟೆ ಉತ್ಸವದೊ೦ದಿಗೆ ಕಟ್ಟೆ ಪೂಜೆ,ರಾತ್ರಿ ಬೀಡಿನಗುಡ್ಡೆಯಲ್ಲಿ ವಿಶೇಷ ಸುಡುಮದ್ದು ಪ್ರದರ್ಶನ ನಡೆಯಲಿದೆ.

ಮಸೀದಿ ಸೇರಿದಂತೆ 1,200 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳ ನೆಲಸಮ ಮಾಡಿದ ಯೋಗಿ ಸರ್ಕಾರ

ಅಕ್ಬರ್‌ನಗರ, ಜೂ.20: ಉತ್ತರಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ​​ ಅವರ ಸರ್ಕಾರ ಒಂದಲ್ಲ ಒಂದು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೂಲಕ ಮಾಫಿಯ, ಅಕ್ರಮ ಮಾಡುವವರಿಗೆ ಕಡಿವಾಣ ಹಾಕುತ್ತಿದ್ದಾರೆ. ಇದೀಗ ದೊಡ್ಡ ಮಟ್ಟದ ಕಾರ್ಯಚರಣೆ ಮಾಡಿದ್ದಾರೆ. ಅಕ್ಬರ್‌ನಗರದ ಕುಕ್ರೈಲ್ ನದಿಯ ತಳದಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ ಎಂದು ಲಕ್ನೋ ಅಭಿವೃದ್ಧಿ ಪ್ರಾಧಿಕಾರದ (ಎಲ್‌ಡಿಎ) ಅಧಿಕಾರಿಗಳು ಹೇಳಿದ್ದಾರೆ. ಜೂನ್​ 19ರಿಂದ ಪ್ರಾರಂಭವಾಗಿ ಇಂದು (ಜೂ.20) ಈ ಕಾರ್ಯಚರಣೆ ಕೊನೆಗೊಂಡಿದೆ.

ಬುಲ್ಡೋಜರ್‌ಗಳು ಸೇರಿದಂತೆ ಭಾರೀ ಯಂತ್ರೋಪಕರಣಗಳನ್ನು ಬಳಸಿ ಸುಮಾರು 1,169 ಅಕ್ರಮ ವಸತಿ ಆಸ್ತಿಗಳು ಮತ್ತು 100 ಕ್ಕೂ ಹೆಚ್ಚು ವಾಣಿಜ್ಯ ಆಸ್ತಿಗಳನ್ನು ನೆಲಸಮ ಮಾಡಲಾಗಿದೆ. ಇದರಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಿರುವ ಮಸೀದಿಗಳನ್ನು ಕೂಡ ಕೆಡವಿದ್ದಾರೆ. 24.5 ಎಕರೆ ಜಾಗದಲ್ಲಿ ನಡೆದಿರುವ ಅಕ್ರಮ ಒತ್ತುವರಿ ತೆರವು ಕಾರ್ಯ ಕಳೆದ ವರ್ಷ ಡಿಸೆಂಬರ್‌ನಲ್ಲಿ ಆರಂಭವಾಗಿತ್ತು. ಈ ಪ್ರದೇಶದಲ್ಲಿ ಧಾರ್ಮಿಕ ಸ್ಥಳಗಳು ಸೇರಿದಂತೆ 1,320 ಕ್ಕೂ ಹೆಚ್ಚು ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡಲಾಗಿದೆ.

ಜೂನ್ 18 ರಂದು ಸುಮಾರು 100 ಕಟ್ಟಡಗಳನ್ನು ಕೆಡವಲಾಯಿತು. ಇದೀಗ ಅದರ ಅವಶೇಷಗಳನ್ನು ತೆರವುಗೊಳಿಸುವ ಕೆಲಸ ನಡೆಯುತ್ತಿದೆ. ಇನ್ನು ಈ ತೆರವು ಕಾರ್ಯಚರಣೆಯಿಂದ ಮನೆ ಕಳೆದುಕೊಂಡಿರುವ ಬಡ ಜನರಿಗೆ ನಗರದ ಇತರ ಭಾಗದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಪರ್ಯಾಯ ವಸತಿ ಒದಗಿಸಲಾಗಿದೆ. ಅಕ್ಬರ್‌ನಗರದ 1,800ಕ್ಕೂ ಹೆಚ್ಚು ಕುಟುಂಬಗಳು ವಸತಿ ಸೌಲಭ್ಯ ಪಡೆದಿವೆ. ಈ ಪ್ರದೇಶದಲ್ಲಿ ಪರಿಸರ ಪ್ರವಾಸೋದ್ಯಮ ಕೇಂದ್ರವನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಮುಂದಾಗಿದೆ.

No Comments

Leave A Comment