ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಪವಿತ್ರಾ ಗೌಡ ಜೈಲು ಪಾಲು; ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ನ್ಯಾಯಾಂಗ ಬಂಧನ-ದರ್ಶನ್‌, ವಿನಯ್, ಪ್ರದೋಶ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಧನರಾಜ್‌ನನ್ನು 4 ದಿನಗಳ ಕಾಲ ಮತ್ತೆ ಪೊಲೀಸ್​ ಕಸ್ಟಡಿಗೆ

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇಷ್ಟು ದಿನಗಳ ಕಾಲ ಪೊಲೀಸ್​ ಕಸ್ಟಡಿಯಲ್ಲಿ ಇದ್ದ ನಟಿ ಪವಿತ್ರಾ ಗೌಡ ಜೈಲು ಪಾಲು ಆಗಿದ್ದಾರೆ. ಪೊಲೀಸ್​ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಇಂದು (ಜೂನ್​ 20) ಎಲ್ಲ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡ ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇನ್ಮುಂದೆ ಪವಿತ್ರಾ ಗೌಡ  ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯಬೇಕಿದೆ. ಈ ಪ್ರಕರಣದಲ್ಲಿ ಅವರು ಎ1 ಆಗಿರುವ ಕಾರಣ ಕಾನೂನಿನ ಸಂಕಷ್ಟ ಹೆಚ್ಚಾಗಿದೆ. ದರ್ಶನ್​, ವಿನಯ್​ ಮುಂತಾದವರು ಕೂಡ ಈ ಕೇಸ್​ನಲ್ಲಿ ಆರೋಪಿಗಳಾಗಿದ್ದಾರೆ.

ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯು ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್​ ಕಳಿಸಿದ್ದ ಎಂಬ ಆರೋಪಿ ಇದೆ. ಆದ್ದರಿಂದ ಆತನಿಗೆ ಬುದ್ಧಿ ಕಲಿಸಲು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಹತ್ಯೆ ಮಾಡಲಾಯಿತು. ಈ ಕೇಸ್​ನಲ್ಲಿ 19 ಜನರನ್ನು ಪೊಲೀಸರು ಬಂಧಿಸಿದ್ದಾರೆ. ದರ್ಶನ್​, ಪವಿತ್ರಾ ಗೌಡ, ಪವನ್​, ವಿನಯ್​, ಪ್ರದೋಶ್‌, ನಾಗರಾಜ್‌, ಲಕ್ಷ್ಮಣ್‌ ಮುಂತಾದವರು ಪ್ರಮುಖ ಆರೋಪಿಗಳು.

ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ಈ ಕೇಸ್​ನ ವಿಚಾರಣೆ ನಡೆಯುತ್ತಿದೆ. ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಅನೇಕ ಸ್ಥಳಗಳಿಗೆ ತೆರಳಿ ಮಹಜರು ಮಾಡಲಾಗಿದೆ. ಪವಿತ್ರಾ ಗೌಡ ಮನೆಯಲ್ಲೂ ಮಹಜರು ಮಾಡಲಾಗಿತ್ತು. ತನಿಖೆ ಇನ್ನೂ ಪ್ರಗತಿಯಲ್ಲಿದೆ. ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶಿಸಿದೆ.

ಪವಿತ್ರಾ ಗೌಡಗೆ ನ್ಯಾಯಾಂಗ ಬಂಧನ ವಿಧಿಸಿರುವ ಹಿನ್ನೆಲೆಯಲ್ಲಿ ಮಗಳು ಖುಷಿ ಗೌಡ ಕೋರ್ಟ್​ಗೆ ಆಗಮಿಸಿದ್ದಾರೆ. ಜೈಲಾದ ಕಾರಣ ಪವಿತ್ರಾ ಗೌಡರನ್ನು ಮಾತನಾಡಿಸಲು ಮಗಳು ಮತ್ತು ಅಜ್ಜಿ ಬಂದಿದ್ದಾರೆ.

ತನಿಖೆ ಇನ್ನೂ ಬಾಕಿ ಇರುವ ಕಾರಣದಿಂದ ದರ್ಶನ್‌, ವಿನಯ್, ಪ್ರದೋಶ್‌, ನಾಗರಾಜ್‌, ಲಕ್ಷ್ಮಣ್‌ ಹಾಗೂ ಧನರಾಜ್‌ನನ್ನು 4 ದಿನಗಳ ಕಾಲ ಮತ್ತೆ ಪೊಲೀಸ್​ ಕಸ್ಟಡಿಗೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಲಾಗಿದೆ.

No Comments

Leave A Comment