Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಲೋಕಸಭೆ ಸ್ಪೀಕರ್ ಹುದ್ದೆ: ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ, ಇಂಡಿಯಾ ಬಣದ ಕೆ ಸುರೇಶ್ ನಡುವೆ ಪೈಪೋಟಿ!

ನವದೆಹಲಿ: 18ನೇ ಲೋಕಸಭೆ ಸ್ಪೀಕರ್ ಸ್ಥಾನಕ್ಕಾಗಿ ಎನ್ ಡಿಎ ಅಭ್ಯರ್ಥಿ ಓಂ ಬಿರ್ಲಾ ಹಾಗೂ ವಿರೋಧ ಪಕ್ಷಗಳ ಇಂಡಿಯಾ ಬಣದ ಅಭ್ಯರ್ಥಿ ಕೋಡಿಕುನ್ನಿಲ್ ಸುರೇಶ್ ನಡುವೆ ಪೈಪೋಟಿಯನ್ನು ಕಾಣಬಹುದಾಗಿದೆ. ಉಪ ಸ್ಪೀಕರ್ ಸ್ಥಾನವನ್ನು ಬಿಟ್ಟುಕೊಡುವುದಾಗಿ ಎನ್ ಡಿಎ ಭರವಸೆ ನೀಡದ ಹಿನ್ನೆಲೆಯಲ್ಲಿ ವಿರೋಧಪಕ್ಷಗಳು ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿವೆ. ಸಂಸತ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸ್ಪೀಕರ್ ಸ್ಥಾನಕ್ಕಾಗಿ ಪೈಪೋಟಿವೇರ್ಪಟ್ಟಿದ್ದು, ನಾಳೆ ಬೆಳಗ್ಗೆ 11 ಗಂಟೆಗೆ ಮತದಾನ ನಡೆಯಲಿದೆ.

ಕೆ. ಸುರೇಶ್ ಉಮೇದುವಾರಿಕೆ ಸಲ್ಲಿಕೆ

17ನೇ ಲೋಕಸಭೆಯ ಸ್ಪೀಕರ್ ಆಗಿದ್ದ ಬಿಜೆಪಿಯ ಓಂ ಬಿರ್ಲಾ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಹುದ್ದೆಗೆ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎಗೆ ಹೆಚ್ಚಿನ ಸಂಖ್ಯೆಯಿರುವ ಕಾರಣ ಅವರು ಆಯ್ಕೆಯಾಗಲಿದ್ದಾರೆ, ಆದರೆ ಇದಕ್ಕೆ ಪ್ರತಿಪಕ್ಷಗಳು ಅಸಮಾಧಾನವನ್ನು ವ್ಯಕ್ತಪಡಿಸುತ್ತಿವೆ. ಬಿರ್ಲಾ ಅವರ ಪ್ರತಿಸ್ಪರ್ಧಿಯಾಗಿರುವ ಕೋಡಿಕುನ್ನಿಲ್ ಸುರೇಶ್, ಕೇರಳದ ಮಾವೆಲಿಕರಾ ಕ್ಷೇತ್ರದಿಂದ ಎಂಟು ಬಾರಿ ಸಂಸದರಾಗಿದ್ದಾರೆ. ಪ್ರಸ್ತುತದ ಸದಸ್ಯರಲ್ಲಿ ಅತಿ ಹೆಚ್ಚು ಚುನಾವಣೆಗಳನ್ನು ಗೆದ್ದಿರುವ ಕಾರಣ ಅವರನ್ನು ಹಂಗಾಮಿ ಸ್ಪೀಕರ್ ಆಗಿ ಹೆಸರಿಸಬೇಕೆಂದು ಪ್ರತಿಪಕ್ಷಗಳು ಭಾವಿಸಿದ್ದವು. ಆದರೆ, ಎನ್‌ಡಿಎ ಭರ್ತೃಹರಿ ಮಹತಾಬ್ ಪರವಾಗಿ ಮತ ಚಲಾಯಿಸಿದ್ದು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವಿನ ಮೊದಲ ಬಿಕ್ಕಟ್ಟಿಗೆ ಕಾರಣವಾಯಿತು.

‘ ನಾನು ಸತತವಾಗಿ ಎಂಟು ಬಾರಿ ಲೋಕಸಭೆ ಸದಸ್ಯನಾಗಿರಲಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವರು ವಾದಿಸುತ್ತಾರೆ. ಆದರೆ, ಮಹತಾಬ್ ಆರು ಬಾರಿ ಬಿಜೆಡಿ ಸಂಸದರಾಗಿ ಸೇವೆ ಸಲ್ಲಿಸಿದ್ದು, ಈಗ ಮೊದಲ ಬಾರಿಗೆ ಬಿಜೆಪಿ ಸಂಸದರಾಗಿದ್ದಾರೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹಾರಿದವರು ಹೇಗೆ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಲು ಸಾಧ್ಯ? ಇದು ಪ್ರಜಾಸತಾತ್ಮಕ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಸುರೇಶ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ತಮ್ಮ ನಿರಾಸೆಯನ್ನು ವ್ಯಕ್ತಪಡಿಸಿದರು.

ಮಂಗಳವಾರ ಅಧಿವೇಶನಕ್ಕೂ ಮುಂಚಿತವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ ನಂತರ ಈ ಬೆಳವಣಿಗೆಗಳು ನಡೆದಿವೆ. ಹಿಂದಿನ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಎನ್ ಡಿಎ ನಾಮನಿರ್ದೇಶಿತರಾಗಿ ಲೋಕಸಭೆಗೆ ಮರಳಲು ಸಿದ್ಧತೆ ನಡೆಸುತ್ತಿರುವಾಗಲೇ, ಕಾಂಗ್ರೆಸ್ ಅಸಮಾಧಾನವಿದೆ ಎಂದು ರಾಹುಲ್ ಗಾಂಧಿ ಸ್ಪಷ್ಟಪಡಿಸಿದ ನಂತರ ಅವರು ಒಮ್ಮತದ ಅಭ್ಯರ್ಥಿಯಾಗದಿರುವ ಸಾಧ್ಯತೆ ಕಂಡುಬಂದಿತು.

No Comments

Leave A Comment