Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕುಸಿದು ಓರ್ವ ಸಾವು, ಹಲವರಿಗೆ ಗಾಯ

ದೆಹಲಿ, ಜೂ.28: ದೆಹಲಿಯಲ್ಲಿ ಭಾರೀ ಮಳೆ ಉಂಟಾಗಿದ್ದು, ಸಂಪೂರ್ಣ ದೆಹಲಿ ಮುಗುವ ಸ್ಥಿತಿಗೆ ಬಂದಿದೆ. ಇಂದು ಬೆಳಿಗ್ಗೆ ಭಾರೀ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗವು ಕೆಳಗೆ ನಿಂತಿರುವ ಕಾರುಗಳ ಮೇಲೆ ಬಿದ್ದಿದೆ. ಇದರಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹಾಗೂ ಆರು ಮಂದಿ ಗಾಯಗೊಂಡಿದ್ದಾರೆ . ಟರ್ಮಿನಲ್ 1 ರಿಂದ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಚೆಕ್-ಇನ್ ಕೌಂಟರ್​​ಗಳನ್ನು ಸುರಕ್ಷತಾ ಕ್ರಮಕ್ಕಾಗಿ ಮುಚ್ಚಲಾಗಿದೆ ಎಂದು ಎಂದು ದೆಹಲಿ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಟರ್ಮಿನಲ್-1 ದೇಶೀಯ ವಿಮಾನ ಕಾರ್ಯಾಚರಣೆ ಮಾತ್ರ ಎಂದು ಹೇಳಿದ್ದಾರೆ. ಇಂಡಿಗೋ ಮತ್ತು ಸ್ಪೈಸ್‌ಜೆಟ್‌ನ T1 ನಿಂದ ಹೊರಡುವ ಎಲ್ಲಾ ವಿಮಾನಗಳು ಇಂದು ಮಧ್ಯಾಹ್ನ 2 ಗಂಟೆಯವರೆಗೆ ರದ್ದುಗೊಳಿಸಲಾಗಿದೆ. ಈಗಾಗಲೇ ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್‌ಎಸ್) ಸ್ಥಳಕ್ಕೆ ಧಾವಿಸಿದ್ದು, ಇನ್ನು ಮಳೆಯಿಂದ ಕ್ಯಾಬ್‌ಗಳು ಸೇರಿದಂತೆ ಹಲವು ವಾಹನಗಳು ಹಾನಿಗೊಳಗಾಗಿವೆ. ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ನ ಪಿಕ್-ಅಪ್ ಮತ್ತು ಡ್ರಾಪ್ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರುಗಳ ಮೇಲೆ ಮೇಲ್ಛಾವಣಿಯ ಶೀಟ್ ಕುಸಿದು ಬಿದ್ದಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ವಿಮಾನ ನಿಲ್ದಾಣದ ಅಧಿಕೃತ ಹೇಳಿಕೆ ಪ್ರಕಾರ, ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಹಳೆಯ ನಿರ್ಗಮನದ ಮುಂಭಾಗದಲ್ಲಿರುವ ಮೇಲಾವರಣದ ಒಂದು ಭಾಗವು ಇಂದು ಬೆಳಿಗ್ಗೆ ಭಾರೀ ಮಳೆಯಿಂದಾಗಿ ಕುಸಿದಿದೆ ಎಂದು ಹೇಳಿದ್ದಾರೆ. ಇದರಿಂದ ಕೆಲವರಿಗೆ ಗಾಯಗಳು ಆಗಿದೆ. ಈಗಾಗಲೇ ಎಲ್ಲಾ ನೆರವು ಮತ್ತು ವೈದ್ಯಕೀಯ ನೆರವು ಒದಗಿಸಲು ತುರ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್‌ಗಳನ್ನು ಮುಚ್ಚಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣ ಸಿಬ್ಬಂದಿ ಹೇಳಿದ್ದಾರೆ.

ಇನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಪ್ರಯಾಣಿಕರಲ್ಲಿ ಕ್ಷಮೆಯಾಚನೆ ಮಾಡಿದೆ. ಈ ಅಡಚಣೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಹಾಗೂ ಇಲ್ಲಿ ಉಂಟಾದ ಗೊಂದಲ ಹಾಗೂ ಪ್ರಯಾಣಿಕರಿಗೆ ಆಗಿರುವ ಹಾನಿಗೆ ಕ್ಷಮೆಯಾಚಿಸುತ್ತೇವೆ ಎಂದು ಹೇಳಿದೆ. ಈ ಬಗ್ಗೆ ಎಕ್ಸ್​​ ಮೂಲಕ ಪತ್ರಕ್ರಿಯಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತದ ಘಟನೆಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ ಮತ್ತು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು.

No Comments

Leave A Comment