ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಉಳ್ಳಾಲ: ಕಡಲ್ಕೊರೆತಕ್ಕೆ ಸಮುದ್ರಪಾಲಾದ 1 ಮನೆ; ಅಪಾಯದಲ್ಲಿರುವ ಮನೆಗಳು
ಉಳ್ಳಾಲ: ಜೂ.28,ಕಡಲ್ಕೊರೆತಕ್ಕೆ ಮನೆಯೊಂದು ಸಮುದ್ರ ಪಾಲಾದ ಘಟನೆ ಉಚ್ಚಿಲ ಬಟ್ಟಪಾಡಿಯಲ್ಲಿ ಗುರುವಾರ ನಡೆದಿದ್ದು, ಇನ್ನು 3 ಮನೆ ಅಪಾಯದಲ್ಲಿರುವ ಘಟನೆ ವರದಿಯಾಗಿದೆ.
ಅಪಾಯದಂಚಿನಲ್ಲಿದ್ದ ಈ ಮನೆಯಲ್ಲಿ ನೆಲೆಸಿದ್ದ ಬೀಫಾತುಮ್ಮಾ ಅವರ ಕುಟುಂಬವನ್ನು ಜೂನ್ 26ರಂದೇ ಸ್ಥಳಾಂತರಿಸಲಾಗಿತ್ತು. ಹೀಗಾಗಿ ಸಂಭವನೀಯ ಅಪಾಯ ತಪ್ಪಿದಂತಾಗಿದೆ. ಇನ್ನು ಈ ಪ್ರದೇಶದಲ್ಲಿ ಅಪಾಯದಂಚಿನಲ್ಲಿದ್ದ 3 ಮನೆಗಳ ಸದಸ್ಯರನ್ನು ಜೂನ್ 27ರಂದು ಅಧಿಕಾರಿಗಳು ಸ್ಥಳಾಂತರಿಸಿದ್ದರು.
ಈ ಪ್ರದೇಶದಲ್ಲಿ ಸಮುದ್ರದ ಅಲೆಗಳ ಅಬ್ಬರ ತೀವ್ರಗೊಂಡಿದ್ದು, ಈಗಾಗಲೇ ಕೊಚ್ಚಿಹೋಗಿರುವ ಬೀಫಾತುಮ್ಮಾ ಅವರ ಮನೆಯ ಹಿಂಬದಿಯಲ್ಲೇ ಇರುವ ಮೂರು ಮನೆಗಳು ಅಪಾಯಕ್ಕೆ ಸಿಲುಕಿವೆ. ಈ ಮನೆಗಳಿಗೂ ಕಡಲ ಅಲೆಗಳು ರಭಸವಾಗಿ ಅಪ್ಪಳಿಸುತ್ತಿದ್ದು, ಇವುಗಳು ಕೂಡ ಸಮುದ್ರಪಾಲಾಗುವ ಹಿನ್ನಲೆಯಲ್ಲಿ ಈ ಮನೆಯ ಸದಸ್ಯರನ್ನು ಸ್ಥಳಾಂತರಿಸಲಾಗಿತ್ತು.
ಸ್ಥಳಾಂತರಗೊಂಡ ನಾಲ್ಕು ಮನೆಯ ಸದಸ್ಯರುಗಳು ಸದ್ಯ ಸಂಬಂಧಿಕರ ಮನೆಗಳಲ್ಲಿ ನೆಲೆಸಿದ್ದಾರೆ. ಶೀಘ್ರವೇ ಅವರುಗಳಿಗೆ ಪರ್ಯಾಯ ಬಾಡಿಗೆ ಮನೆಗಳ ವ್ಯವಸ್ಥೆ ಮಾಡಲಾಗುವುದು ಎಂದು ಸೋಮೇಶ್ವರ ಪುರಸಭಾ ಮುಖ್ಯಾಧಿಕಾರಿ ಮತ್ತಡಿ ಮಾಹಿತಿ ನೀಡಿದ್ದಾರೆ.