ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರಿಗೆ ಬೀಳ್ಕೊಡುಗೆ ಸಮಾರಂಭ

ಉಡುಪಿ: ಮಂಗಳೂರು ವಿಭಾಗದ ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರು ನಿವೃತ್ತಿ ಹೊಂದಿದ್ದು,ಅವರಿಗೆ ಬಿಳ್ಕೋಡುಗೆ ಸಮಾರಂಭ ಉಡುಪಿ ಶಾರದಾ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಶನಿವಾರದ೦ದು ನಡೆಯಿತು.

ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ,ಮಂಗಳೂರು ನಗರ ಅಪರಾಧ ವಿಭಾಗದ ಡಿ.ಸಿ.ಪಿ ದಿನೇಶ್ ಕುಮಾರ್ ರವರು ಭಾಗವಹಿಸಿ ನಿವೃತ್ತಿ ಹೊಂದುತ್ತಿರುವವರಿಗೆ ಶುಭ ಹಾರೈಸಿರುತ್ತಾರೆ. ಕಾರ್ಯಕ್ರಮದಲ್ಲಿ ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರು ವಿಭಾಗಕ್ಕೆ ಒಳಪಡುವ ಮಂಗಳೂರು, ಉಡುಪಿ,ಚಿಕ್ಕಮಗಳೂರು ಕಾರವಾರ ಜಿಲ್ಲೆಗಳ ಅಧಿಕಾರಿ ಹಾಗೂ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.

No Comments

Leave A Comment