ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರಿಗೆ ಬೀಳ್ಕೊಡುಗೆ ಸಮಾರಂಭ
ಉಡುಪಿ: ಮಂಗಳೂರು ವಿಭಾಗದ ರಾಜ್ಯ ಗುಪ್ತಚರ ಇಲಾಖೆಯ ಉಪ-ನಿರ್ದೇಶಕರಾದ ಎನ್.ಎಂ.ಧರ್ಮಪ್ಪರವರು ನಿವೃತ್ತಿ ಹೊಂದಿದ್ದು,ಅವರಿಗೆ ಬಿಳ್ಕೋಡುಗೆ ಸಮಾರಂಭ ಉಡುಪಿ ಶಾರದಾ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ಶನಿವಾರದ೦ದು ನಡೆಯಿತು.
ಸಮಾರಂಭದಲ್ಲಿ ಮುಖ್ಯ ಅಥಿತಿಗಳಾಗಿ ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ,ಮಂಗಳೂರು ನಗರ ಅಪರಾಧ ವಿಭಾಗದ ಡಿ.ಸಿ.ಪಿ ದಿನೇಶ್ ಕುಮಾರ್ ರವರು ಭಾಗವಹಿಸಿ ನಿವೃತ್ತಿ ಹೊಂದುತ್ತಿರುವವರಿಗೆ ಶುಭ ಹಾರೈಸಿರುತ್ತಾರೆ. ಕಾರ್ಯಕ್ರಮದಲ್ಲಿ ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರು ವಿಭಾಗಕ್ಕೆ ಒಳಪಡುವ ಮಂಗಳೂರು, ಉಡುಪಿ,ಚಿಕ್ಕಮಗಳೂರು ಕಾರವಾರ ಜಿಲ್ಲೆಗಳ ಅಧಿಕಾರಿ ಹಾಗೂ ಸಿಬ್ಬಂದಿಯವರು ಭಾಗವಹಿಸಿರುತ್ತಾರೆ.