ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಹಿಜಾಬ್ ಬಳಿಕ ಇದೀಗ ಜೀನ್ಸ್​ ಪ್ಯಾಂಟ್​, ಟಿ- ಶರ್ಟ್​ ನಿಷೇಧಿಸಿದ ಕಾಲೇಜು

ಹಿಜಾಬ್(Hijab) ನಿಷೇಧದ ನಂತರ ಮುಂಬೈನ ಈ ಕಾಳೇಜಿನಲ್ಲಿ ಜೀನ್ಸ್ ಮತ್ತು ಟೀ ಶರ್ಟ್‌ಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದೆ. ಸೋಮವಾರ ಚೆಂಬೂರಿನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಗೇಟ್‌ನಲ್ಲಿ ಜೀನ್ಸ್ ಮತ್ತು ಟೀ ಶರ್ಟ್ ಧರಿಸಿದ್ದ ವಿದ್ಯಾರ್ಥಿಗಳನ್ನು ತಡೆದಿದ್ದರು. ಕಾಲೇಜು ಹೊಸ ವಸ್ತ್ರಸಂಹಿತೆಯನ್ನು ಬಿಡುಗಡೆ ಮಾಡಿದೆ. ಕೆಲ ದಿನಗಳ ಹಿಂದೆಯಷ್ಟೇ ಕಾಲೇಜಿನಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿತ್ತು.

ಜೂನ್ 27 ರಂದು ಆಚಾರ್ಯ ಮತ್ತು ಮರಾಠೆ ಕಾಲೇಜು ಹೊರಡಿಸಿದ ನೋಟಿಸ್ ಪ್ರಕಾರ, ಹರಿದ ಜೀನ್ಸ್, ಟಿ-ಶರ್ಟ್, ತೆರೆದ ಬಟ್ಟೆ ಮತ್ತು ಜೆರ್ಸಿಗಳಿಗೆ ಅನುಮತಿ ಇಲ್ಲ ಎಂದು ಹೇಳಿದೆ. ಕಾಲೇಜು ಪ್ರಾಂಶುಪಾಲರಾದ ಡಾ.ವಿದ್ಯಾಗೌರಿ ಲೇಲೆ ಅವರು ನೋಟಿಸ್ ಜಾರಿ ಮಾಡಿದ್ದಾರೆ.

ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಔಪಚಾರಿಕ ಮತ್ತು ಯೋಗ್ಯವಾದ ಉಡುಪನ್ನು ಧರಿಸಬೇಕು. ಅವರು ಅರ್ಧ-ಶರ್ಟ್ ಅಥವಾ ಪೂರ್ಣ-ಶರ್ಟ್ ಮತ್ತು ಪ್ಯಾಂಟ್ ಧರಿಸಬಹುದು. ಹುಡುಗಿಯರು ಭಾರತೀಯ ಅಥವಾ ಪಾಶ್ಚಿಮಾತ್ಯ ಉಡುಗೆಯನ್ನು ಧರಿಸಬಹುದು. ವಿದ್ಯಾರ್ಥಿಗಳು ಧರ್ಮ ಅಥವಾ ಸಾಂಸ್ಕೃತಿಕ ಅಸಮಾನತೆಯನ್ನು ಪ್ರತಿಬಿಂಬಿಸುವ ಯಾವುದೇ ಉಡುಪನ್ನು ಧರಿಸಬಾರದು.

ನಿಖಾಬ್, ಹಿಜಾಬ್, ಬುರ್ಖಾ, ಸ್ಟೋಲ್, ಕ್ಯಾಪ್, ಬ್ಯಾಡ್ಜ್ ಇತ್ಯಾದಿಗಳನ್ನು ಕೊಠಡಿಯಲ್ಲಿಯೇ ಇರಿಸಿಕೊಳ್ಳಬೇಕು ಆಗ ಅವರು ಇಡೀ ಕಾಲೇಜು ಆವರಣದಲ್ಲಿ ಓಡಾಡಬಹುದಾಗಿದೆ. ಕಳೆದ ವರ್ಷ ಹಿಜಾಬ್​ಗೆ ನಿಷೇಧ ಹೇರಲಾಗಿತ್ತು, ಇದೀಗ ಟಿ-ಶರ್ಟ್​ ಹಾಗೂ ಜೀನ್ಸ್​ಗೆ ನಿಷೇಧ ಹೇರಲಾಗಿದೆ.

ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿರುವಾಗ ಔಪಚಾರಿಕ ಮತ್ತು ಯೋಗ್ಯವಾದ ಉಡುಗೆಯನ್ನು ಧರಿಸಬೇಕು. ಕಾಲೇಜಿನ ಪ್ರಕಾರ, ಕಾರ್ಪೊರೇಟ್ ಜಗತ್ತಿಗೆ ಸಿದ್ಧವಾಗಲು ಆಡಳಿತವು ಅವರನ್ನು ಸಿದ್ಧಪಡಿಸುತ್ತಿದೆ. ದಾಖಲಾತಿ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಡ್ರೆಸ್​ಕೋಡ್​ ಬಗ್ಗೆ ತಿಳಿಸಲಾಗಿತ್ತು. ಈ ಹಿಂದೆ ಹಿಜಾಬ್ ನಿಷೇಧದ ವಿರುದ್ಧ 9 ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್​ ಮೆಟ್ಟಿಲೇರಿದ್ದರು.

No Comments

Leave A Comment