ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಳ್ತಂಗಡಿ: ನೇಣು ಬಿಗಿದು ಮಹಿಳೆ ಆತ್ಮಹತ್ಯೆಗೆ ಶರಣು

ಬೆಳ್ತಂಗಡಿ, ಜು.2: ನೇಣು ಬಿಗಿದು ಮಹಿಳೆಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ಧರ್ಮಸ್ಥಳದ ಜೋಡುಸ್ಥಾನದಲ್ಲಿ ಜುಲೈ 2ರಂದು ಮ೦ಗಳವಾರ ನಡೆದಿದೆ.

ಜೋಡುಸ್ಥಾನ ನಿತ್ಯನೂತನ ಭಜನ ಮಂದಿರ ಬಳಿಯ ನಿವಾಸಿ ರಕ್ಷಿತಾ ಜೈನ್ (26) ಆತ್ಮಹತ್ಯೆ ಮಾಡಿಕೊಂಡವರು.

ರಕ್ಷಿತಾ ಜೈನ್ ರವರು ತನ್ನ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ರಕ್ಷಿತಾ ಅವರ ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.

ಮೃತರು ತಂದೆ ವೀರಚಂದ್ರ ಜೈನ್, ತಾಯಿ ಅರುಣಾ, ಪತಿ ಸಂತೋಷ್ ಜೈನ್ ಹಾಗೂ 2 ವರ್ಷದ ಹೆಣ್ಣು ಮಗುವನ್ನು ಅಗಲಿರುತ್ತಾರೆ.

No Comments

Leave A Comment