``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಜೈಲಿನಿಂದ ಹಗಲು-ರಾತ್ರಿ ನಿರ್ಮಾಪಕರಿಗೆ ಕರೆ ಮಾಡಿ ಜಾಮೀನಿಗೆ ಬೇಡಿಕೆ ಇಡುತ್ತಿರುವ ದರ್ಶನ್

ದೇಶಾದ್ಯಂತ ಸುದ್ದಿ ಆಗಿರುವ ರೇಣುಕಾ ಸ್ವಾಮಿ  ಕೊಲೆ ಕೇಸ್​ನಲ್ಲಿ ನಟ ದರ್ಶನ್​ ಜೈಲುವಾಸ ಅನುಭವಿಸುತ್ತಿದ್ದಾರೆ. ಅವರು ನ್ಯಾಯಾಂಗ ಬಂಧನಕ್ಕೆ ಒಳಗಾಗಿ 11 ದಿನ ಆಗಿದೆ. ಆದಷ್ಟು ಬೇಗ ಜಾಮೀನು ಪಡೆಯಬೇಕು ಎಂದು ದರ್ಶನ್​ ಪ್ರಯತ್ನಿಸುತ್ತಿದ್ದಾರೆ. ಜೈಲಿನಲ್ಲಿ ದಿನ ಕಳೆಯುವುದು ದರ್ಶನ್​ಗೆ ಕಷ್ಟ ಆಗುತ್ತಿದೆ. ಅದಕ್ಕಾಗಿ ಅವರು ಚಿತ್ರರಂಗದಲ್ಲಿ ತಮಗೆ ಆಪ್ತರಾಗಿರುವ ಕೆಲವು ನಿರ್ಮಾಪಕರಿಗೆ ಕರೆ ಮಾಡಿ ಜಾಮೀನಿಗಾಗಿ ಒತ್ತಾಯ ಮಾಡುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಪರಪ್ಪನ ಅಗ್ರಹಾರ  ಜೈಲಿನಿಂದ ಹಗಲು-ರಾತ್ರಿ ಕರೆ ಮಾಡಿ ಜಾಮೀನಿಗೆ ವ್ಯವಸ್ಥೆ ಮಾಡುವಂತೆ ದರ್ಶನ್​ ಕೋರುತ್ತಿದ್ದಾರೆ.

ವಾರಕ್ಕೆ 3 ಬಾರಿ ಫೋನ್ ಕರೆ ಮಾಡಲು ಜೈಲಿನ ಸಿಬ್ಬಂದಿ ಅವಕಾಶ ಕೊಟ್ಟಿದ್ದಾರೆ. ಜೈಲಿನ ಫೋನ್ ಬೂತ್‌ನಿಂದ ದರ್ಶನ್ ಕರೆ ಮಾಡುತ್ತಿದ್ದಾರೆ. ಆದರೆ ಈವರೆಗೆ ಒಂದೇ ಒಂದು ಬಾರಿಯೂ ಅವರು ತಮ್ಮ ಕುಟುಂಬದವರಿಗೆ ಫೋನ್​ ಮಾಡಿಲ್ಲ. ಬದಲಿಗೆ, ನಿರ್ಮಾಪಕರಿಗೆ ಮತ್ತು ನಿರ್ದೇಶಕರಿಗೆ ಕರೆ ಮಾಡಿ ಜಾಮೀನಿಗಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ರಾತ್ರಿಯಾದರೆ ಸಾಕು ದರ್ಶನ್​ ಕಡೆಯಿಂದ ನಿರ್ಮಾಪಕರಿಗೆ ಫೋನ್ ಕರೆಗಳು ಹೋಗಲು ಶುರುವಾಗುತ್ತವೆ.

ಹೇಗಾದರೂ ಮಾಡಿ ತಮ್ಮನ್ನು ಜೈಲಿನಿಂದ ಹೊರಗೆ ತರುವಂತೆ ದರ್ಶನ್​ ಒತ್ತಾಯ ಮಾಡುತ್ತಿದ್ದಾರೆ. ಅಕ್ಕ-ಪಕ್ಕದ ಖೈದಿಗಳಿಗೆ ಮೀಸಲಾಗಿದ್ದ ಫೋನ್​ ಕರೆಗಳನ್ನು ಕೂಡ ದರ್ಶನ್​ ಅವರೇ ಬಳಸಿಕೊಳ್ಳುತ್ತಿದ್ದಾರೆ. ಜಾಮೀನು ಪಡೆಯಬೇಕು ಎಂಬ ಹಂಬಲ ಅವರಲ್ಲಿ ಹೆಚ್ಚಾಗಿದೆ. ಸತತ 11 ದಿನಗಳಿಂದ ಜೈಲು ವಾಸದಲ್ಲಿ ಇರುವ ದರ್ಶನ್​ ಅವರನ್ನು ನೋಡಲು ಪರಪ್ಪನ ಅಗ್ರಹಾರದ ಬಳಿ ಅನೇಕರು ಬರುತ್ತಿದ್ದಾರೆ.

ಹೇಗಿದೆ ದರ್ಶನ್​ ಪರಿಸ್ಥಿತಿ?

ಪವಿತ್ರಾ ಗೌಡ ಜೊತೆ ದರ್ಶನ್​ ಜೈಲು ಸೇರಿದ ಕೂಡಲೇ ನಟನ ಕುಟುಂಬದವರು ಭೇಟಿಯಾಗಲು ಬಂದಿರಲಿಲ್ಲ. ನಂತರ ಪತ್ನಿ ವಿಜಯಲಕ್ಷ್ಮಿ ಅವರು ಜೈಲಿಗೆ ಭೇಟಿ ನೀಡಿದರು. ಆ ಬಳಿಕ ಸಹೋದರ ದಿನಕರ್ ತೂಗುದೀಪ, ತಾಯಿ ಮೀನಾ ಕೂಡ ಪರಪ್ಪನ ಅಗ್ರಗಾರಕ್ಕೆ ಬಂದು ದರ್ಶನ್​ ಅವರನ್ನು ಮಾತನಾಡಿಸಿದರು. ಕುಟುಂಬದರ ಭೇಟಿಯ ಬಳಿಕ ದರ್ಶನ್​ ಅವರು ಸ್ವಲ್ಪ ರಿಲ್ಯಾಕ್ಸ್​ ಆಗಿದ್ದಾರೆ.

ಜುಲೈ 1ರಂದು ತಾಯಿ, ತಮ್ಮ, ಪತ್ನಿ, ಅಕ್ಕ ಸೇರಿದಂತೆ ದರ್ಶನ್ ಕುಟುಂಬದ ಹಲವರು ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದರು. ಇದರಿಂದ ದರ್ಶನ್​ಗೆ ಸ್ವಲ್ಪ ಸಮಾಧಾನ ಆಗಿದೆ. ಹಾಗಾಗಿ, ರಾತ್ರಿ ಬೇಗನೇ ನಿದ್ರೆಗೆ ಜಾರಿದ್ದ ಅವರು ಇಂದು (ಜುಲೈ 2) ಬೆಳಿಗ್ಗೆ ಬೇಗ ಎದ್ದು ಸೆಲ್​ನಲ್ಲೇ ಕೆಲವೊತ್ತು ವಾಕಿಂಗ್ ಮಾಡಿದ್ದಾರೆ. ಜೈಲ್ ಸಿಬ್ಬಂದಿ ಬಳಿ ಬಿಸಿನೀರು ಕೇಳಿ ಪಡೆದರು. ಜೈಲಿನ ಮೆನುವಿನಂತೆ ದರ್ಶನ್​ಗೆ ಅವಲಕ್ಕಿ, ಉಪ್ಪಿಟ್ಟು ನೀಡಲಾಗಿದೆ.

No Comments

Leave A Comment