ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್: ಪೋಷಕರ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್ ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ.
ದರ್ಶನ್ ಮೇಲಿನ ಅಂಧಭಿಮಾನ ಪ್ರದರ್ಶನಕ್ಕೆ ಮುಂದಾಗಿ ಕಾನೂನಿನ ಕುಣಿಕೆಗೆ ಈಗ ಪೋಷಕರು ತಗ್ಲಾಕಿಕೊಂಡಿದ್ದಾರೆ. ಈ ವಿಚಾರ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿಕೊಂಡಿದೆ. ಈಗ ಪೊಲೀಸ್ ಇಲಾಖೆಯ ಮೂಲಕ ಪೋಷಕರ ಪತ್ತೆ ಕಾರ್ಯಕ್ಕೆ ಮುಂದಾಗಿದೆ.
ಮಾಧ್ಯಮದವರ ಮುಂದೆ ಮಕ್ಕಳ ಹಕ್ಕುಗಳ ಆಯೋಗದ ಸದಸ್ಯ ಶಶಿಧರ್ ಕೊಸಂಬೆ ಪ್ರತಿಕ್ರಿಯಿಸಿ, ಈ ರೀತಿ ಫೋಟೋ ಶೂಟ್ ಮಾಡಿಸಿರುವುದು ನಿಜಕ್ಕೂ ಖಂಡನೀಯ. ಹೀಗಾಗಿ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ಈ ಬಗ್ಗೆ ಇವತ್ತು ಪೊಲೀಸ್ ಇಲಾಖೆ ಐಟಿ ಸೆಲ್ ಪತ್ರ ಬರೆಯಲಾಗುತ್ತದೆ. ಪೋಟೋ ಶೂಟ್ ಮಾಡಿಸಿದವರ ಪತ್ತೆ ಮಾಡಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಈ ಫೋಟೋ ಶೂಟ್ ಪ್ರಕರಣವನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ಇದು ಬಾಲ ನ್ಯಾಯ ಕಾಯ್ದೆಯ ಸ್ಪಷ್ಟ ಉಲ್ಲಂಘನೆ. ಕಾನೂನಿನಡಿ ಯಾವೆಲ್ಲ ಕ್ರಮಗಳಿಗೆ ಸಾಧ್ಯತೆ ಇದೆಯೋ ಅದೆಲ್ಲವನ್ನೂ ಕೈಗೊಳ್ಳುತ್ತೇವೆ ಎಂದರು.