ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಜು.18ರ ತನಕ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸರ ಬಲೆಗೆ ಬಿದ್ದಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಮುಂತಾದವರಿಗೆ ಸಂಕಷ್ಟ ಹೆಚ್ಚಾಗಿದೆ. ಇಂದು (ಜುಲೈ 4) ನ್ಯಾಯಾಂಗ ಬಂಧನದ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸುವಂತೆ ಎಸ್ಪಿಪಿ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಯಿತು. ಆರ್ಥಿಕ ಅಪರಾಧಗಳ ಕೋರ್ಟ್ಗೆ ರಿಮ್ಯಾಂಡ್ ಅರ್ಜಿ ಸಲ್ಲಿಕೆ ಆಗಿದೆ. ಜುಲೈ 18ರವರೆಗೆ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ಕೊಲೆ ಆರೋಪಿಗಳಾದ ಪವಿತ್ರಾ ಗೌಡ, ದರ್ಶನ್ ಹಾಗೂ ಅವರ ಸಹಚರರಿಗೆ ಜೈಲೇ ಗತಿಯಾಗಿದೆ. ಪರಪ್ಪನ ಅಗ್ರಹಾರ ಹಾಗೂ ತುಮಕೂರು ಜೈಲಿನಲ್ಲಿ ಇರುವ ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ನಲ್ಲಿ ಹಾಜರು ಪಡಿಸಲಾಯಿತು. ಜಡ್ಜ್ ಎಲ್ಲರ ಹೆಸರು ಕರೆಯುತ್ತಿದ್ದಂತೆಯೇ ಕೈಎತ್ತಿ ಹಾಜರಿ ಖಾತರಿಪಡಿಸಿದರು. ದರ್ಶನ್ ಅವರು ಜೈಲಿನಿಂದ ಹೊರಬರಲಿ ಎಂಬುದು ಅಭಿಮಾನಿಗಳು ಮತ್ತು ಆಪ್ತರ ಬಯಕೆ ಆಗಿದೆ. ಆದರೆ ಇದು ಗಂಭೀರ ಪ್ರಕರಣ ಆದ್ದರಿಂದ ಜಾಮೀನು ಸಿಗುವುದು ಸದ್ಯಕ್ಕೆ ಕಷ್ಟವಾಗಿದೆ.
ದರ್ಶನ್ ಸ್ನೇಹಿತೆಯಾದ ಪವಿತ್ರಾ ಗೌಡಗೆ ಚಿತ್ರದುರ್ಗದ ರೇಣುಕಾ ಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎನ್ನಲಾಗಿದೆ. ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಭೀಕರವಾಗಿ ಹತ್ಯೆ ಮಾಡಿದ ಆರೋಪ ದರ್ಶನ್ ಹಾಗೂ ಡಿ ಗ್ಯಾಂಗ್ ಮೇಲಿದೆ. ರಾಷ್ಟ್ರ ಮಟ್ಟದಲ್ಲಿ ಈ ಪ್ರಕರಣ ಸುದ್ದಿ ಆಗುತ್ತಿದೆ. ದರ್ಶನ್ ಅವರನ್ನು ನೋಡಲು ಅಭಿಮಾನಿಗಳು ಪ್ರತಿದಿನ ಜೈಲಿನ ಬಳಿ ಬರುತ್ತಿದ್ದಾರೆ.
ರೇಣುಕಾ ಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅನೇಕ ಸೆಲೆಬ್ರಿಟಿಗಳು ಒತ್ತಾಯಿಸಿದ್ದಾರೆ. ಇತ್ತ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ಗಂಡನ ಪರವಾಗಿ ಹೋರಾಡುತ್ತಿದ್ದಾರೆ. ಇಷ್ಟು ದಿನ ಸ್ಟಾರ್ ನಟನಾಗಿ ಐಷಾರಾಮಿ ಜೀವನ ಸಾಗಿಸುತ್ತಿದ್ದ ದರ್ಶನ್ಗೆ ಜೈಲಿನಲ್ಲಿ ದಿನ ಕಳೆಯುವುದು ಕಷ್ಟವಾಗಿದೆ. ಹಾಗಾಗಿ ತಮಗೆ ಆಪ್ತರಾದ ನಿರ್ಮಾಪಕರಿಗೆ ಕರೆ ಮಾಡಿ ಜಾಮೀನು ಕೊಡಿಸುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಇತ್ತೀಚೆಗೆ ಮಾಹಿತಿ ಲಭ್ಯವಾಗಿತ್ತು.